ಸುಬ್ರಹ್ಮಣಿಯನ್ ಸ್ವಾಮಿ 
ದೇಶ

ರಾಜ್ಯಸಭೆಗೆ ಸುಬ್ರಹ್ಮಣಿಯನ್ ಸ್ವಾಮಿ ಆಯ್ಕೆಯನ್ನು ನಿರ್ಧರಿಸಿದ ಇಬ್ಬರು ಬಿಜೆಪಿ ನಾಯಕರು ಯಾರು ಗೊತ್ತಾ?

ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ಅವರ ಆಯ್ಕೆಯನ್ನು ನಿರ್ಧರಿಸಿದ್ದು ಬಿಜೆಪಿಯ ಇಬ್ಬರೇ ನಾಯಕರು!

ನವದೆಹಲಿ: ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕಲಾಪದಲ್ಲಿ ಭಾಗಿಯಾಗಿದ್ದಾರೆ. ಆದರೆ ಅವರ ಆಯ್ಕೆಯನ್ನು ನಿರ್ಧರಿಸಿದ್ದು ಬಿಜೆಪಿಯ ಇಬ್ಬರೇ ನಾಯಕರು!
ಹೌದು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡುವುದಕ್ಕೂ ಮುನ್ನ ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಣೆ ಮಾಡಿ ನಂತರ ಅಂತಿಮಗೊಳಿಸಲಾಗುತ್ತದೆ. ಆದರೆ ಸುಬ್ರಹ್ಮಣಿಯನ್ ಸ್ವಾಮಿ ಅವರ ಆಯ್ಕೆ ಸಂದರ್ಭದಲ್ಲಿ ಬೇರೆ ಯಾವುದೇ ಬಿಜೆಪಿ ನಾಯಕರ ಅಭಿಪ್ರಾಯ ಪಡೆಯದೇ ಹೆಸರನ್ನು ಅಂತಿಮಗೊಳಿಸಲಾಗಿದ್ದು ಈ ನಿರ್ಧಾರವನ್ನು ಪ್ರಧಾನಿ ಮೋದಿ ಹಾಗು ಅಮಿತ್ ಶಾ ಕೈಗೊಂಡಿದ್ದಾರೆ ಎನ್ನಲಾಗಿದೆ.    
ಸುಬ್ರಹ್ಮಣಿಯನ್ ಸ್ವಾಮಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಅವರ ಬೆಂಬಲವೂ ಇತ್ತು ಎಂದು ಹೇಳಲಾಗಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸುಬ್ರಹ್ಮಣಿಯನ್ ಸ್ವಾಮಿ ಪರಿಣಾಮಕಾರಿಯಾಗಿ ಕೆಲಸ ಮಾಡಿರುವುದನ್ನು ಪರಿಗಣಿಸಿ ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ