ಸುಬ್ರಹ್ಮಣಿಯನ್ ಸ್ವಾಮಿ 
ದೇಶ

ರಾಜ್ಯಸಭೆಗೆ ಸುಬ್ರಹ್ಮಣಿಯನ್ ಸ್ವಾಮಿ ಆಯ್ಕೆಯನ್ನು ನಿರ್ಧರಿಸಿದ ಇಬ್ಬರು ಬಿಜೆಪಿ ನಾಯಕರು ಯಾರು ಗೊತ್ತಾ?

ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ಅವರ ಆಯ್ಕೆಯನ್ನು ನಿರ್ಧರಿಸಿದ್ದು ಬಿಜೆಪಿಯ ಇಬ್ಬರೇ ನಾಯಕರು!

ನವದೆಹಲಿ: ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕಲಾಪದಲ್ಲಿ ಭಾಗಿಯಾಗಿದ್ದಾರೆ. ಆದರೆ ಅವರ ಆಯ್ಕೆಯನ್ನು ನಿರ್ಧರಿಸಿದ್ದು ಬಿಜೆಪಿಯ ಇಬ್ಬರೇ ನಾಯಕರು!
ಹೌದು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡುವುದಕ್ಕೂ ಮುನ್ನ ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಣೆ ಮಾಡಿ ನಂತರ ಅಂತಿಮಗೊಳಿಸಲಾಗುತ್ತದೆ. ಆದರೆ ಸುಬ್ರಹ್ಮಣಿಯನ್ ಸ್ವಾಮಿ ಅವರ ಆಯ್ಕೆ ಸಂದರ್ಭದಲ್ಲಿ ಬೇರೆ ಯಾವುದೇ ಬಿಜೆಪಿ ನಾಯಕರ ಅಭಿಪ್ರಾಯ ಪಡೆಯದೇ ಹೆಸರನ್ನು ಅಂತಿಮಗೊಳಿಸಲಾಗಿದ್ದು ಈ ನಿರ್ಧಾರವನ್ನು ಪ್ರಧಾನಿ ಮೋದಿ ಹಾಗು ಅಮಿತ್ ಶಾ ಕೈಗೊಂಡಿದ್ದಾರೆ ಎನ್ನಲಾಗಿದೆ.    
ಸುಬ್ರಹ್ಮಣಿಯನ್ ಸ್ವಾಮಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಅವರ ಬೆಂಬಲವೂ ಇತ್ತು ಎಂದು ಹೇಳಲಾಗಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸುಬ್ರಹ್ಮಣಿಯನ್ ಸ್ವಾಮಿ ಪರಿಣಾಮಕಾರಿಯಾಗಿ ಕೆಲಸ ಮಾಡಿರುವುದನ್ನು ಪರಿಗಣಿಸಿ ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

SCROLL FOR NEXT