ಮೊದಲ ಬಾರಿಗೆ ಪ್ರತ್ಯೇಕತಾವಾದಿಗಳನ್ನು ದೂರವಿಟ್ಟು ಭಾರತದೊಂದಿಗೆ ಮಾತುಕತೆ ನಡೆಸಿದ ಪಾಕ್! 
ದೇಶ

ಮೊದಲ ಬಾರಿಗೆ ಪ್ರತ್ಯೇಕತಾವಾದಿಗಳನ್ನು ದೂರವಿಟ್ಟು ಭಾರತದೊಂದಿಗೆ ಮಾತುಕತೆ ನಡೆಸಿದ ಪಾಕ್!

ಬಹುಶಃ 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪಾಕಿಸ್ತಾನ ಹುರಿಯತ್ ನ ಪ್ರತ್ಯೇಕತಾವಾದಿ ನಾಯಕರನ್ನು ಬದಿಗಿರಿಸಿ ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದೆ.

ನವದೆಹಲಿ: ಬಹುಶಃ  20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪಾಕಿಸ್ತಾನ ಹುರಿಯತ್ ನ ಪ್ರತ್ಯೇಕತಾವಾದಿ ನಾಯಕರನ್ನು ಬದಿಗಿರಿಸಿ ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದೆ.
ಏ.26 ರಂದು ನಡೆದ ವಿದೇಶಾಂಗ ಇಲಾಖೆ ಕಾರ್ಯದರ್ಶಿಗಳ ನಡುವಿನ ದ್ವಿಪಕ್ಷೀಯ ಮಾತುಕತೆಯಲ್ಲಿ ಪ್ರತ್ಯೇಕತಾವಾದಿ ನಾಯಕರನ್ನು ದೂರವಿಟ್ಟಿದ್ದರ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಪ್ರತ್ಯೇಕತಾವಾದಿ ನಾಯಕ ಅಯಾಜ್ ಅಕ್ಬರ್, ಈ ಬಗ್ಗೆ ನೀವು ಪಾಕಿಸ್ತಾನದವರನ್ನೇ ಪ್ರಶ್ನಿಸಬೇಕು ಎಂದು ಹೇಳಿದ್ದಾರೆ.
ಪಾಕ್ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಭಾರತಕ್ಕೆ ಬಂದಿದ್ದರಾದರೂ, ಹುರಿಯತ್ ನಾಯಕರನ್ನು ಭೇಟಿಯಾಗಿಲ್ಲ. ಬಹುಶಃ  20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಂಥದ್ದೊಂದು ಘಟನೆ ನಡೆದಿದ್ದು, ಹುರೀಯತ್ ನಾಯಕರನ್ನು ಮಾತುಕತೆಗೆ ಆಹ್ವಾನಿಸಿದ್ದೇ ಈ ಹಿಂದೆ ಭಾರತ- ಪಾಕ್ ನಡುವಿನ ಮಾತುಕತೆ ರದ್ದುಗೊಳ್ಳಲು ಕಾರಣ ಎಂದು ಹುರಿಯತ್ ನಾಯಕ ಅಯಾಜ್ ಅಕ್ಬರ್ ಹೇಳಿದ್ದಾರೆ.
ಹುರಿಯತ್ ಕಾನ್ಫರೆನ್ಸ್  ಭಾರತ-ಪಾಕಿಸ್ತಾನ ನಡುವಿನ ಮಾತುಕತೆ ನಡೆಯುವುದನ್ನು ವಿರೋಧಿಸುತ್ತಿಲ್ಲ. ಭಾರತ- ಪಾಕಿಸ್ತಾನದ ನಡುವೆ ಉತ್ತಮ ಬಾಂಧವ್ಯ ಇರಬಾರದು ಎಂದು ನಾವು ಹೇಳಿಲ್ಲ. ಆದರೆ ಉಭಯ ದೇಶಗಳ ನಡುವಿನ ಬಾಂಧವ್ಯಕ್ಕೆ ಕಾಶ್ಮೀರ ವಿವಾದ ಅಡ್ಡಿಯಾಗಿದ್ದು, ಕಾಶ್ಮೀರಿ ಜನತೆಯ ಆಕಾಂಕ್ಷೆಗಳಿಗೆ ಅನುಗುಣವಾಗಿ ವಿವಾದ ಬಗೆಹರಿಯಬೇಕು ಎಂದು ಅಯಾಜ್ ಅಕ್ಬರ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!

ನಿಂಬೆಹಣ್ಣು ಕತ್ತರಿಸಿ, ಮಳೆ ನಿಲ್ಲಿಸಿದೆ: ವಿವಾದವನ್ನು ಮೈ ಮೇಲೆ ಎಳೆದುಕೊಂಡ ಬಿಜೆಪಿ ಸಂಸದ! ಕಾಂಗ್ರೆಸ್, ನೆಟ್ಟಿಗರ ಲೇವಡಿ