ಸಾಂದರ್ಭಿಕ ಚಿತ್ರ 
ದೇಶ

ವಿವಿಐಪಿ ಕಾಪ್ಟರ್ ಹಗರಣ: ಇಟಲಿ ಕಂಪನಿಯಿಂದ ಮಾಧ್ಯಮ ನಿರ್ವಹಣೆಗೆ 50 ಕೋಟಿ ಖರ್ಚು

ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಗಳು ಹೊರ ಬೀಳುತ್ತಿದ್ದು, ಸಂಸತ್ತಿನಲ್ಲಿ ಆಡಳತರೂಢ ಬಿಜೆಪಿ ಹಾಗೂ...

ನವದೆಹಲಿ: ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಗಳು ಹೊರ ಬೀಳುತ್ತಿದ್ದು, ಸಂಸತ್ತಿನಲ್ಲಿ ಆಡಳತರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.
ಇಂದು ಲೋಕಸಭೆಯಲ್ಲಿ ಆಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ ಪ್ರಸ್ತಾಪಿಸಿದ ಬಿಜೆಪಿ, ಭಾರತದಲ್ಲಿ ಮಾಧ್ಯಮ ನಿರ್ವಹಣೆಗಾಗಿ ಇಟಲಿ ಕಂಪನಿ ಬರೊಬ್ಬರಿ 50 ಕೋಟಿ ಖರ್ಚು ಮಾಡಿದೆ ಎಂದು ಆರೋಪಿಸಿದೆ,
ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು, ಮಾಧ್ಯಮ ನಿರ್ವಹಣೆಗಾಗಿ ಮಧ್ಯವರ್ತಿ ಕ್ರಿಶ್ಚಿಯನ್‌ ಮೈಕೆಲ್ ಗೆ 50 ಕೋಟಿ ನೀಡಲಾಗಿತ್ತು ಎಂದು ತಿಳಿಸಿದರು.
ಪ್ರತಿಪಕ್ಷ ಕಾಂಗ್ರೆಸ್ ನ ತೀವ್ರ ಪ್ರತಿಭಟನೆಯ ನಡುವೆಯೂ ವಿಷಯ ಪ್ರಸ್ತಾಪಿಸಿದ ಲೇಖಿ, ಮಾಧ್ಯಮ ಪ್ರಜಾಪ್ರಭುತ್ವದ ನಾಲ್ಕನೆ ಅಂಗವಾಗಿದ್ದು, ಅದನ್ನು ದುರ್ಬಳಕೆ ಮಾಡಿಕೊಂಡಿದ್ದು ದುರದೃಷ್ಟಕರ ಎಂದರು.
ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಸಂಸದರು ಕಾಪ್ಟರ್ ಹಗರಣ ಪ್ರಸ್ತಾಪಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಖರ್ಗೆ, ಮೇಡಂ ನಾನು ನಿಮ್ಮನ್ನು ತುಂಬಾ ಗೌರವಿಸುತ್ತೇನೆ. ದಯವಿಟ್ಟು ಇದಕ್ಕೆ ಅವಕಾಶ ನೀಡಬೇಡಿ ಎಂದು ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ಮನವಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT