ಪಾಟಿದಾರ್ ಸಮುದಾಯದ ಪ್ರತಿಭಟನೆ 
ದೇಶ

ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ 10ರಷ್ಟು ಮೀಸಲಾತಿ: ಗುಜರಾತ್ ಸರ್ಕಾರ ಘೋಷಣೆ

ಪಾಟೀದಾರ್ ಸಮುದಾಯ ಒಳಗೊಂಡಂತೆ ಆರ್ಥಿಕವಾಗಿ ಹಿಂದುಳಿದಿರುವ ಸಾಮಾನ್ಯ ವರ್ಗಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ...

ಅಹಮದಾಬಾದ್: ಪಾಟೀದಾರ್ ಸಮುದಾಯ ಒಳಗೊಂಡಂತೆ ಆರ್ಥಿಕವಾಗಿ ಹಿಂದುಳಿದಿರುವ ಸಾಮಾನ್ಯ ವರ್ಗಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇಕಡಾ 10ರಷ್ಟು ಮೀಸಲಾತಿ ನೀಡಲಾಗುವುದು ಎಂದು ಗುಜರಾತ್ ಸರ್ಕಾರ ಶುಕ್ರವಾರ ಘೋಷಣೆ ಮಾಡಿದೆ.
ಮಾಧ್ಯಮಗಳಿಗೆ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ವರ್ಷಕ್ಕೆ 6 ಲಕ್ಷ ಅಥವಾ ಅದಕ್ಕಿಂತ ಕಡಿಮೆ ಆದಾಯ ಹೊಂದಿರುವವವರಿಗೆ ಮೀಸಲಾತಿ ಸೌಲಭ್ಯ ನೀಡಲಾಗುವುದು ಎಂದು ಹೇಳಿದರು.

ಉದ್ಯೋಗ ಮತ್ತು ಶಿಕ್ಷಣದಲ್ಲಿ ಪಾಟೀದಾರ್ ಸಮುದಾಯ ಸೇರಿದಂತೆ ಸಾಮಾನ್ಯ ವರ್ಗಗಳ ಕುಟುಂಬಗಳಿಗೆ ಅವರ ಆದಾಯದವನ್ನು ಪರಿಗಣಿಸಿ ಮೀಸಲಾತಿ ನೀಡಬೇಕೆಂದು ಹಲವಾರು ತಿಂಗಳುಗಳಿಂದ ಪಟೇಲ್ ಸಮುದಾಯ ನಡೆಸುತ್ತಿರುವ ಪ್ರತಿಭಟನೆಗೆ ಕೊನೆಗೂ ಮಣಿದು ಗುಜರಾತ್ ಸರ್ಕಾರ ಈ ಘೋಷಣೆ ಮಾಡಿದೆ. ಸರ್ಕಾರದ ಅಧಿಸೂಚನೆಯನ್ನು ಮೇ 1ರಂದು ಗುಜರಾತ್ ಸ್ಥಾಪನೆ ದಿನದಂದು ಹೊರಡಿಸುವ ನಿರೀಕ್ಷೆಯಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದಲೇ ಈ ಮೀಸಲಾತಿ ಜಾರಿಗೆ ಬರಲಿದೆ. ಈ ಹೊಸ ಮೀಸಲಾತಿ ಜಾರಿಯಿಂದ ಈಗಿರುವ ಎಸ್ ಸಿ/ ಎಸ್ಟಿ ಮತ್ತು ಒಬಿಸಿ ವರ್ಗಗಳ ಮೀಸಲಾತಿಗೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯ್ ರೂಪಾನಿ ತಿಳಿಸಿದ್ದಾರೆ.

ಶೇಕಡಾ 10 ರಷ್ಟು ಮೀಸಲಾತಿ ನೀಡುವ ಸರ್ಕಾರದ ನಿರ್ಧಾರ ಕೇವಲ ಕಣ್ಣೊರೆಸುವ ತಂತ್ರವಷ್ಟೆ. ಇಷ್ಟು ದೊಡ್ಡ ಸಮುದಾಯಕ್ಕೆ ಶೇಕಡಾ 10 ಮೀಸಲಾತಿ ಸಾಕಾಗುವುದಿಲ್ಲ. ನಾವು ಶೇಕಡಾ 20ರಷ್ಟು ಮೀಸಲಾತಿಗೆ ಹೋರಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT