ಶಿಬು ಬೇಬಿ ಜಾನ್ 
ದೇಶ

ಟಿವಿ ಲೈವ್ ಚರ್ಚೆ ವೇಳೆ ಸಚಿವನ ಮೇಲೆ ಕಲ್ಲು ತೂರಾಟ: ಇಬ್ಬರಿಗೆ ಗಾಯ

ಖಾಸಗಿ ಟಿವಿ ವಾಹಿನಿಯೊಂದರ ಚರ್ಚೆ ವೇಳೆ ಎಡ ಪಕ್ಷದ ಅಭ್ಯರ್ಥಿ ಸಚಿವರ ಮೇಲೆ ಚೇರ್ ಮತ್ತು ಕಲ್ಲು ತೂರಿರುವ ಘಟನೆ ಕೇರಳದಲ್ಲಿ ನಡೆದಿದೆ....

ಕೊಲ್ಲಂ: ಖಾಸಗಿ ಟಿವಿ ವಾಹಿನಿಯೊಂದರ ಚರ್ಚೆ ವೇಳೆ ಎಡ ಪಕ್ಷದ ಅಭ್ಯರ್ಥಿ ಸಚಿವರ ಮೇಲೆ ಚೇರ್ ಮತ್ತು ಕಲ್ಲು ತೂರಿರುವ ಘಟನೆ ಕೇರಳದಲ್ಲಿ ನಡೆದಿದೆ.

ಕೇರಳ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಥಳೀಯ ಖಾಸಗಿ ಚಾನೆಲ್ ವೊಂದು ರಾಜಕಾರಣಿಗಳ ಜೊತೆ ಚರ್ಚೆ ನಡೆಸಿತ್ತು. ಈ ವೇಳೆ ಎಡರಂಗದ ಅಭ್ಯರ್ಥಿ ಎನ್.ಜಯನ್ ಕೇರಳ ಕಾರ್ಮಿಕ ಸಚಿವ ಶಿಬು ಬೇಬಿ ಜಾನ್  ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಜೊತೆಗೆ ಕುರ್ಚಿಯನ್ನು ಅವರ ಮೇಲೆ ಎಸೆದು ಹಲ್ಲೆ ಮಾಡಿದ್ದಾರೆ.

ಈ ವೇಳೆ ಅಲ್ಲಿದ್ದ ಜನ ಇಬ್ಬರ ಮೇಲೂ ಕಲ್ಲು ತೂರಾಟ ನಡೆಸಿದ್ದರಿಂದ ಇಬ್ಬರು ಗಾಯಗೊಂಡಿದ್ದಾರೆ. ಜಾನ್ ಅವರನ್ನು ಕೂಡಲೇ ಕೊಲ್ಲಂನ  ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.

ಜಾನ್ ವೃತ್ತಿಯಲ್ಲಿ ಎಂಜಿನಿಯರ್.  ಕ್ರಾಂತಿಕಾರಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿರುವ ಅವರು ಈ ಹಿಂದೆ ಎರಡು ಬಾರಿ ಗೆಲುವು ಸಾಧಿಸಿರುವ ಚವರ ವಿಧಾನಸಭಾ ಕ್ಷೇತ್ರದ ಸ್ಪರ್ಧಿಸುತ್ತಿದ್ದಾರೆ.

ಅವರಿಗಿಂತಲೂ ಮೊದಲು ಜಾನ್ ಅವರ ತಂದೆ ಬೇಬಿ ಜಾನ್ ಚವರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಅವರು ಟ್ರೇಡ್ ಯೂನಿಯನ್ ನಾಯಕರು ಮತ್ತು ಸಚಿವರು ಸಹ ಆಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT