ಶಿಬು ಬೇಬಿ ಜಾನ್ 
ದೇಶ

ಟಿವಿ ಲೈವ್ ಚರ್ಚೆ ವೇಳೆ ಸಚಿವನ ಮೇಲೆ ಕಲ್ಲು ತೂರಾಟ: ಇಬ್ಬರಿಗೆ ಗಾಯ

ಖಾಸಗಿ ಟಿವಿ ವಾಹಿನಿಯೊಂದರ ಚರ್ಚೆ ವೇಳೆ ಎಡ ಪಕ್ಷದ ಅಭ್ಯರ್ಥಿ ಸಚಿವರ ಮೇಲೆ ಚೇರ್ ಮತ್ತು ಕಲ್ಲು ತೂರಿರುವ ಘಟನೆ ಕೇರಳದಲ್ಲಿ ನಡೆದಿದೆ....

ಕೊಲ್ಲಂ: ಖಾಸಗಿ ಟಿವಿ ವಾಹಿನಿಯೊಂದರ ಚರ್ಚೆ ವೇಳೆ ಎಡ ಪಕ್ಷದ ಅಭ್ಯರ್ಥಿ ಸಚಿವರ ಮೇಲೆ ಚೇರ್ ಮತ್ತು ಕಲ್ಲು ತೂರಿರುವ ಘಟನೆ ಕೇರಳದಲ್ಲಿ ನಡೆದಿದೆ.

ಕೇರಳ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಥಳೀಯ ಖಾಸಗಿ ಚಾನೆಲ್ ವೊಂದು ರಾಜಕಾರಣಿಗಳ ಜೊತೆ ಚರ್ಚೆ ನಡೆಸಿತ್ತು. ಈ ವೇಳೆ ಎಡರಂಗದ ಅಭ್ಯರ್ಥಿ ಎನ್.ಜಯನ್ ಕೇರಳ ಕಾರ್ಮಿಕ ಸಚಿವ ಶಿಬು ಬೇಬಿ ಜಾನ್  ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಜೊತೆಗೆ ಕುರ್ಚಿಯನ್ನು ಅವರ ಮೇಲೆ ಎಸೆದು ಹಲ್ಲೆ ಮಾಡಿದ್ದಾರೆ.

ಈ ವೇಳೆ ಅಲ್ಲಿದ್ದ ಜನ ಇಬ್ಬರ ಮೇಲೂ ಕಲ್ಲು ತೂರಾಟ ನಡೆಸಿದ್ದರಿಂದ ಇಬ್ಬರು ಗಾಯಗೊಂಡಿದ್ದಾರೆ. ಜಾನ್ ಅವರನ್ನು ಕೂಡಲೇ ಕೊಲ್ಲಂನ  ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.

ಜಾನ್ ವೃತ್ತಿಯಲ್ಲಿ ಎಂಜಿನಿಯರ್.  ಕ್ರಾಂತಿಕಾರಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿರುವ ಅವರು ಈ ಹಿಂದೆ ಎರಡು ಬಾರಿ ಗೆಲುವು ಸಾಧಿಸಿರುವ ಚವರ ವಿಧಾನಸಭಾ ಕ್ಷೇತ್ರದ ಸ್ಪರ್ಧಿಸುತ್ತಿದ್ದಾರೆ.

ಅವರಿಗಿಂತಲೂ ಮೊದಲು ಜಾನ್ ಅವರ ತಂದೆ ಬೇಬಿ ಜಾನ್ ಚವರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಅವರು ಟ್ರೇಡ್ ಯೂನಿಯನ್ ನಾಯಕರು ಮತ್ತು ಸಚಿವರು ಸಹ ಆಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT