ವಿಜಯ್ ಮಲ್ಯ 
ದೇಶ

ಎಲೆಕ್ಟ್ರಾನಿಕ್ ಮಾಧ್ಯಮ ಕುರಿತ ಮಲ್ಯ ಹೇಳಿಕೆ ಒಂದು ಮೆಚ್ಚುಗೆ: ಬಿಇಎ ಕಾರ್ಯದರ್ಶಿ

ಸರ್ಕಾರವನ್ನು ಕೆರಳಿಸುವಲ್ಲಿ ಎಲೆಕ್ಟ್ರಾನಿಕ್ ಮಾಧ್ಯಮ ಪ್ರಮುಖ ಪಾತ್ರ ವಹಿಸುತ್ತಿದೆ ಎಂಬ ಮದ್ಯದ ದೊರೆ ವಿಜಯ್ ಮಲ್ಯ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ...

ಘಾಜಿಯಾಬಾದ್: ಸರ್ಕಾರವನ್ನು ಕೆರಳಿಸುವಲ್ಲಿ ಎಲೆಕ್ಟ್ರಾನಿಕ್ ಮಾಧ್ಯಮ ಪ್ರಮುಖ ಪಾತ್ರ ವಹಿಸುತ್ತಿದೆ ಎಂಬ ಮದ್ಯದ ದೊರೆ ವಿಜಯ್ ಮಲ್ಯ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಸಾರ ಸಂಪಾದಕರ ಸಂಘ(ಬಿಇಎ)ದ ಕಾರ್ಯದರ್ಶಿ ಎನ್.ಕೆ.ಸಿಂಗ್ ಅವರು, ಅವರ ಹೇಳಿಕೆಯನ್ನು ತಾವು ಒಂದು ಮೆಚ್ಚುಗೆಯಾಗಿ ಸ್ವೀಕರಿಸುವುದಾಗಿ ಶುಕ್ರವಾರ ಹೇಳಿದ್ದಾರೆ.
'ಮಾಧ್ಯಮ ತನ್ನ ಕೆಲಸವನ್ನು ಮಾಡುತ್ತಿದೆ. ಹೀಗಾಗಿ ನಾನು ಅವರ ಹೇಳಿಕೆಯನ್ನು ಒಂದು ಮೆಚ್ಚುಗೆಯಾಗಿ ಸ್ವೀಕರಿಸುತ್ತೇನೆ. ಒಂದು ವೇಳೆ ವಿಜಯ್ ಮಲ್ಯ ಅವರು ಪ್ರಜಾಪ್ರಭುತ್ವದ ಸೂಕ್ಷ್ಮತೆಗಳನ್ನು ಅರಿತುಕೊಂಡಿದ್ದರೆ, ಮಾಧ್ಯಮ ಎತ್ತಿದ ವಿಷಯಗಳನ್ನು ಅವರು ತಿಳಿದುಕೊಳ್ಳಲಿ. ಮಾಧ್ಯಮ ಯಾವತ್ತೂ ಸಾರ್ವಜನಕರಲ್ಲಿ ಅರಿವು ಮೂಡಿಸುತ್ತದೆ' ಎಂದು ಸಿಂಗ್ ಹೇಳಿದ್ದಾರೆ.
ಸಂದರ್ಶನವೊಂದಲ್ಲಿ ವಿಜಯ್ ಮಲ್ಯ, ಇವತ್ತು ಭಾರತದಲ್ಲಿ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳವುದು ಬಹಳ ಮುಖ್ಯ. ಎಲೆಕ್ಟ್ರಾನಿಕ್ ಮಾಧ್ಯಮಗಳು ಸಾರ್ವಜನಿಕರು ಅಭಿಪ್ರಾಯವನ್ನು ಹೇಳುವುದಷ್ಟೆ ಅಲ್ಲದೆ ಸರ್ಕಾರ ಕ್ರಮ ಕೈಗೊಳ್ಳಲು ಪ್ರಚೋದನೆ ನೀಡುತ್ತಿವೆ ಎಂದು ಆರೋಪಿಸಿದ್ದರು.
ಇದೇ ವೇಳೆ ವಿಜಯ್ ಮಲ್ಯ ಅವರು ಮೊದಲು ಭಾರತಕ್ಕೆ ಬಂದು ಜಾರಿ ನಿರ್ದೇಶನಾಲಯದ ಮಂದೆ ವಿಚಾರಣೆಗೆ ಹಾಜರಾಗಲಿ ಎಂದು ಎನ್.ಕೆ.ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT