ತೃಪ್ತಿ ದೇಸಾಯಿ 
ದೇಶ

ಬ್ರಿಗೇಡ್ ನ ತೃಪ್ತಿ ದೇಸಾಯಿ ದರ್ಗಾ ಪ್ರವೇಶ ಯತ್ನ ವಿಫಲ

ಹಿಂದೂ ದೇವಸ್ಥಾನಗಳಲ್ಲಿ ಮಹಿಳೆಯರ ಪ್ರವೇಶದ ಹಕ್ಕಿಗಾಗಿ ಹೋರಾಡಿದ ಭೂಮಾತಾ ಬ್ರಿಗೇಡ್ ನ ಮುಖ್ಯಸ್ಥೆ ತೃಪ್ತಿ ದೇಸಾಯಿ...

ಮುಂಬೈ: ಹಿಂದೂ ದೇವಸ್ಥಾನಗಳಲ್ಲಿ ಮಹಿಳೆಯರ ಪ್ರವೇಶದ ಹಕ್ಕಿಗಾಗಿ ಹೋರಾಡಿದ ಭೂಮಾತಾ ಬ್ರಿಗೇಡ್ ನ ಮುಖ್ಯಸ್ಥೆ ತೃಪ್ತಿ ದೇಸಾಯಿ ಮುಂಬೈನಲ್ಲಿರುವ ಹಾಜಿ ಅಲಿ ದರ್ಗಾ ಪ್ರವೇಶಿಸಲು ಮಾಡಿದ ಯತ್ನ ವಿಫಲವಾಗಿದೆ. 
ಹಿಂದೂ ದೇವಸ್ಥಾನಗಳಲ್ಲಿ ಮಹಿಳೆಯರ ಪ್ರವೇಶಕ್ಕೆ ಹಕ್ಕಿಗಾಗಿ ಹೋರಾಡಿ ಯಶಸ್ವಿಯಾದ ತೃಪ್ತಿ ದೇಸಾಯಿ, ದರ್ಗಾದ ಒಳಭಾಗವನ್ನು ಪ್ರವೇಶಿಸಲು ಮಹಿಳೆಯರಿಗೆ ಹಕ್ಕಿದೆ ಎಂದು ಹೇಳಿ, ಪ್ರವೇಶಿಸಲು ಮುಂದಾದರು, ಆದರೆ, ಇವರ ಯತ್ನ ವಿಫಲವಾಯಿತು. 
ತದ ನಂತರ ಮಾತನಾಡಿದ ಅವರು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದು ನಮ್ಮ ಉದ್ದೇಶವಲ್ಲ. ಎಲ್ಲಾ ಪೂಜಾ ಸ್ಥಳಗಳಿಗೂ ಮಹಿಳೆಯರಿಗೆ ಪ್ರವೇಶ ಅವಕಾಶ ಸಿಗಬೇಕು ಎಂಬುದೇ ತಮ್ಮ ಉದ್ದೇಶ ಎಂದು ಅವರು ಸ್ಪಷ್ಟನೇ ನೀಡಿದ್ದಾರೆ. 
ಮಹಿಳೆಯರ ಸಮಾನ ಹಕ್ಕಿಗಾಗಿ ನಾವು ಹೋರಾಡುತ್ತಿದ್ದೇವೆ. ಪ್ರತಿಭಟನಾಕಾರರು ಸಂಘರ್ಷಕ್ಕೆ ಇಳಿಯಬಾರದು. ಶಾಂತಿಯುತವಾಗಿ ಹೋರಾಟ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ. 
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಿವಾಸದ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ. ದರ್ಗಾದಲ್ಲೂ ಮಹಿಳೆಯರ ಪ್ರವೇಶ ನೀಡಬೇಕು ಎಂದು ಒತ್ತಾಯಿಸಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT