ತೃಪ್ತಿ ದೇಸಾಯಿ 
ದೇಶ

ಬ್ರಿಗೇಡ್ ನ ತೃಪ್ತಿ ದೇಸಾಯಿ ದರ್ಗಾ ಪ್ರವೇಶ ಯತ್ನ ವಿಫಲ

ಹಿಂದೂ ದೇವಸ್ಥಾನಗಳಲ್ಲಿ ಮಹಿಳೆಯರ ಪ್ರವೇಶದ ಹಕ್ಕಿಗಾಗಿ ಹೋರಾಡಿದ ಭೂಮಾತಾ ಬ್ರಿಗೇಡ್ ನ ಮುಖ್ಯಸ್ಥೆ ತೃಪ್ತಿ ದೇಸಾಯಿ...

ಮುಂಬೈ: ಹಿಂದೂ ದೇವಸ್ಥಾನಗಳಲ್ಲಿ ಮಹಿಳೆಯರ ಪ್ರವೇಶದ ಹಕ್ಕಿಗಾಗಿ ಹೋರಾಡಿದ ಭೂಮಾತಾ ಬ್ರಿಗೇಡ್ ನ ಮುಖ್ಯಸ್ಥೆ ತೃಪ್ತಿ ದೇಸಾಯಿ ಮುಂಬೈನಲ್ಲಿರುವ ಹಾಜಿ ಅಲಿ ದರ್ಗಾ ಪ್ರವೇಶಿಸಲು ಮಾಡಿದ ಯತ್ನ ವಿಫಲವಾಗಿದೆ. 
ಹಿಂದೂ ದೇವಸ್ಥಾನಗಳಲ್ಲಿ ಮಹಿಳೆಯರ ಪ್ರವೇಶಕ್ಕೆ ಹಕ್ಕಿಗಾಗಿ ಹೋರಾಡಿ ಯಶಸ್ವಿಯಾದ ತೃಪ್ತಿ ದೇಸಾಯಿ, ದರ್ಗಾದ ಒಳಭಾಗವನ್ನು ಪ್ರವೇಶಿಸಲು ಮಹಿಳೆಯರಿಗೆ ಹಕ್ಕಿದೆ ಎಂದು ಹೇಳಿ, ಪ್ರವೇಶಿಸಲು ಮುಂದಾದರು, ಆದರೆ, ಇವರ ಯತ್ನ ವಿಫಲವಾಯಿತು. 
ತದ ನಂತರ ಮಾತನಾಡಿದ ಅವರು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದು ನಮ್ಮ ಉದ್ದೇಶವಲ್ಲ. ಎಲ್ಲಾ ಪೂಜಾ ಸ್ಥಳಗಳಿಗೂ ಮಹಿಳೆಯರಿಗೆ ಪ್ರವೇಶ ಅವಕಾಶ ಸಿಗಬೇಕು ಎಂಬುದೇ ತಮ್ಮ ಉದ್ದೇಶ ಎಂದು ಅವರು ಸ್ಪಷ್ಟನೇ ನೀಡಿದ್ದಾರೆ. 
ಮಹಿಳೆಯರ ಸಮಾನ ಹಕ್ಕಿಗಾಗಿ ನಾವು ಹೋರಾಡುತ್ತಿದ್ದೇವೆ. ಪ್ರತಿಭಟನಾಕಾರರು ಸಂಘರ್ಷಕ್ಕೆ ಇಳಿಯಬಾರದು. ಶಾಂತಿಯುತವಾಗಿ ಹೋರಾಟ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ. 
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಿವಾಸದ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ. ದರ್ಗಾದಲ್ಲೂ ಮಹಿಳೆಯರ ಪ್ರವೇಶ ನೀಡಬೇಕು ಎಂದು ಒತ್ತಾಯಿಸಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT