ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 
ದೇಶ

ಮೋದಿಯವರ ವಿದ್ಯಾರ್ಹತೆಯನ್ನೂ ಬಹಿರಂಗಪಡಿಸಿ: ಕೇಜ್ರಿವಾಲ್

ನನ್ನ ವಿದ್ಯಾರ್ಹತೆಯನ್ನು ಬಹಿರಂಗ ಪಡಿಸಿದಂತೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿದ್ಯಾರ್ಹತೆಯನ್ನೂ ಬಹಿರಂಗಪಡಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ...

ನವದೆಹಲಿ: ನನ್ನ ವಿದ್ಯಾರ್ಹತೆಯನ್ನು ಬಹಿರಂಗ ಪಡಿಸಿದಂತೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿದ್ಯಾರ್ಹತೆಯನ್ನೂ ಬಹಿರಂಗಪಡಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶುಕ್ರವಾರ ಆಗ್ರಹಿಸಿದ್ದಾರೆ.

ಈ ಕುರಿತಂತೆ ಕೇಂದ್ರ ಮಾಹಿತಿ ಆಯೋಗಕ್ಕೆ ಪತ್ರ ಬರೆದಿರುವ ಅವರು, ನನ್ನ ವಿದ್ಯಾರ್ಹತೆ ಹಾಗೂ ಆಸ್ತಿ ವಿವರವನ್ನು ಕೇಳಿದ ಸಂದರ್ಭದಲ್ಲಿ ನಾನು ಯಾವುದೇ ಆಕ್ಷೇಪವನ್ನು ವ್ಯಕ್ತಪಡಿಸಿರಲಿಲ್ಲ. ಆದರೆ, ಕೇಂದ್ರೀಯ ಮಾಹಿತಿ ಆಯೋಗ ಮೋದಿಯವರ ಶೈಕ್ಷಣಿಕ ಅರ್ಹತೆಯನ್ನೇಕೆ ಮರೆಯಾಚಲು ಯತ್ನಿಸುತ್ತಿದೆ ಎಂಬುದು ನನಗೆ ಆಶ್ಚರ್ಯವಾಗುತ್ತಿದೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿಯವರು ಪದವಿಯನ್ನೇ ಪಡೆದಿಲ್ಲ ಎಂದು ನನಗೆ ಮಾಹಿತಿ ಮಂದಿದೆ. ದೇಶದ ಜನತೆ ಸತ್ಯವನ್ನು ತಿಳಿದುಕೊಳ್ಳಲು ಬಯಸಿದ್ದಾರೆ. ಮೋದಿಯವರ ಪದವಿ ಮಾಹಿತಿಯನ್ನು ಬಹಿರಂಗಪಡಿಸಲು ಯಾವ ಕಾರಣಕ್ಕೆ ಹಿಂದೇಟು ಹಾಕುತ್ತಿದ್ದೀರಿ. ಇದು ಸರಿಯಾದ ನಡೆಯಲ್ಲ. ಧೈರ್ಯವನ್ನು ತೋರಿಸಿ ದಾಖಲೆಗಳನ್ನು ಬಹಿರಂಗ ಪಡಿಸಿ ಎಂದು ಸಿಐಸಿಗೆ ಕೇಜ್ರಿವಾಲ್ ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2014ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಂದರ್ಭದಲ್ಲಿ ತಾವು ಬಿಎ ಪದವಿಯನ್ನು ದೆಹಲಿ ವಿಶ್ವವಿದ್ಯಾಲಯದಿಂದ ಹಾಗೂ ಸ್ನಾತಕೋತ್ತರ ಪದವಿಯನ್ನು ಗುಜರಾತ್ ವಿಶ್ವವಿದ್ಯಾಲಯದಿಂದ ಪಡೆದಿರುವುದಾಗಿ ಘೋಷಣೆ ಮಾಡಿದ್ದರು. ಇದರಂತೆ ಮೋದಿಯವರ ವಿದ್ಯಾರ್ಹತೆ ಕುರಿತು ಮಾಹಿತಿ ನೀಡುವಂತೆ ಆರ್ ಟಿಐನಲ್ಲಿ ಅರ್ಜಿಯೊಂದು ದಾಖಲಾಗಿತ್ತು.

ಆದರೆ, ಈ ಅರ್ಜಿ ಕುರಿತಂತೆ ಮಾಹಿತಿ ನೀಡಲು ತಿರಸ್ಕರಿಸಿದ್ದ ದೆಹಲಿ ವಿಶ್ವವಿದ್ಯಾಲಯವು ಮೋದಿಯವರ ಅಂಕ ವಿವರಗಳು ಖಾಸಗಿ ಮಾಹಿತಿಯಾಗಿದ್ದು, ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ಇದಾದ ಕೆಲವು ದಿನಗಳ ನಂತರ ಕ್ರಮಸಂಖ್ಯೆ ಇಲ್ಲದ ಕಾರಣ ಈ ಈ ಸಂಬಂಧ ಮಾಹಿತಿ ಹುಡುಕಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT