ಸಾಂದರ್ಭಿಕ ಚಿತ್ರ 
ದೇಶ

ಅಧಿಕ ಉಷ್ಣಾಂಶ; ಹಗಲಿನಲ್ಲಿ ಅಡುಗೆ ತಯಾರಿಗೆ ಬಿಹಾರ ಅಧಿಕಾರಿಗಳ ನಿಷೇಧ

ದೇಶಾದ್ಯಂತ ಬಿಸಿಲಿನ ತಾಪಮಾನ ಹೆಚ್ಚಾಗಿ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ ಬಿಸಿಗಾಳಿಯಿಂದಾಗಿ...

ಪಾಟ್ನಾ: ದೇಶಾದ್ಯಂತ ಬಿಸಿಲಿನ ತಾಪಮಾನ ಹೆಚ್ಚಾಗಿ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ ಬಿಸಿಗಾಳಿಯಿಂದಾಗಿ ಸಂಭವಿಸುತ್ತಿರುವ ಬೆಂಕಿ ಅವಘಡಗಳಿಗೆ ತುತ್ತಾದವರ ಸಂಖ್ಯೆ ಹೆಚ್ಚಿದೆ. 
ಈ ಹಿನ್ನಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಹಗಲು ಹೊತ್ತಿನಲ್ಲಿ ಅಡುಗೆ, ಪೂಜೆ ಹಾಗೂ ಹೋಮ, ಹವನಗಳನ್ನು ಬಿಹಾರದ ಅಧಿಕಾರಿಗಳು ನಿಷೇಧಿಸಿದ್ದಾರೆ.
ಉಷ್ಣತೆ ಹೆಚ್ಚಿರುವ ವೇಳೆಯಲ್ಲಿ ಅಡುಗೆ ಮಾಡುತ್ತಿರಬೇಕಾದರೆ, ಆಕಸ್ಮಿಕ ಬೆಂಕಿ ತಗುಲಿ ಅದರಲ್ಲಿ ಮೃತಪಟ್ಟವರ ಸಂಖ್ಯೆ 80. ಬೇಸಿಗೆಯ ಉಷ್ಣತೆಯಿಂದಾಗಿ ಬೆಂಕಿ ಹೊತ್ತಿಕೊಳ್ಳುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. 
ಈ ಹಿನ್ನಲೆಯಲ್ಲಿ ಬೆಳಿಗ್ಗೆ 9 ಗಂಟೆಯೊಳೆಗೆ ಹಾಗೂ ಸಂಜೆ 6 ಗಂಟೆ ಮೇಲೆ ಬಿಹಾರದ ಜನತೆ ಅಡುಗೆ ಮಾಡಿಕೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಇತ್ತೀಚೆಗಷ್ಟೇ ಬಿಹಾರದಲ್ಲಿ ಸುಮಾರು 2500 ಗುಡಿಸಲುಗಳಿಗೆ ಬೆಂಕಿ ಬಿದ್ದು 36 ಜನರು ಮೃತಪಟ್ಟ ಹಿನ್ನೆಲೆಯಲ್ಲಿ ಬಿಹಾರದ ಸರ್ಕಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೂ ಅಡುಗೆ, ಪೂಜೆ ಹಾಗೂ ಹೋಮ ಹವನಗಳನ್ನು ಮಾಡದಂತೆ ಆದೇಶ ಹೊರಡಿಸಿತ್ತು. ಇಂದಿನಿಂದ ಆ ಆದೇಶ ಜಾರಿಯಲ್ಲಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT