ಸಾಂದರ್ಭಿಕ ಚಿತ್ರ 
ದೇಶ

ಆಂಧ್ರಪ್ರದೇಶ ಸಾರಿಗೆ ಇಲಾಖೆ ಅಧಿಕಾರಿಯ ನಿವಾಸ, ಕಚೇರಿ ಮೇಲೆ ಎಸಿಬಿ ದಾಳಿ: 800 ಕೋಟಿ ಮೌಲ್ಯದ ಸಂಪತ್ತು ವಶ

ಸುಮಾರು 800 ಕೋಟಿ ರೂಪಾಯಿಗೂ ಅಧಿಕ ಆಸ್ತಿ ಹೊಂದಿದ್ದ ಸಾರಿಗೆ ಇಲಾಖೆ ಸಹಾಯಕ ಆಯುಕ್ತರನ್ನು ಆಂಧ್ರ ಪ್ರದೇಶದ ಭ್ರಷ್ಟಾಚಾರ...

ಕಾಕಿನಾಡ: ಸುಮಾರು 800 ಕೋಟಿ ರೂಪಾಯಿಗೂ ಅಧಿಕ ಆಸ್ತಿ ಹೊಂದಿದ್ದ ಸಾರಿಗೆ ಇಲಾಖೆ ಸಹಾಯಕ ಆಯುಕ್ತರನ್ನು ಆಂಧ್ರ ಪ್ರದೇಶದ ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ.

ಭ್ರಷ್ಟಾಚಾರ ವಿರೋಧಿ ಅಧಿಕಾರಿಗಳು ಸಾರಿಗೆ ಇಲಾಖೆ ಸಹಾಯಕ ಆಯುಕ್ತ ಮೋಹನ್ ಎಂಬುವವರು ತೆಲಂಗಾಣ, ಆಂಧ್ರ ಪ್ರದೇಶ ಮತ್ತು ಕರ್ನಾಟಕಗಳಲ್ಲಿ ಹೊಂದಿರುವ ಮನೆ ಹಾಗೂ ಕಚೇರಿಗಳ ಮೇಲೆ ಗುರುವಾರ ಮತ್ತು ಶುಕ್ರವಾರ ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ಘಟಕದ ಡಿಎಸ್ಪಿ ಎ.ರಾಮದೇವಿ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ದಾಖಲೆಗಳ ಪ್ರಕಾರ ಮೋಹನ್ ಅವರ ಆಸ್ತಿ ಮೌಲ್ಯ 100ರಿಂದ 120 ಕೋಟಿ ಇರಬಹುದಾಗಿದ್ದು, ಮಾರುಕಟ್ಟೆ ಬೆಲೆ ಸುಮಾರು 800 ಕೋಟಿ ಇರಬಹುದೆಂದು ನಂಬಲಾಗಿದೆ. ಇವರು ಬ್ಯಾಂಕುಗಳಲ್ಲಿ ಇಟ್ಟಿರುವ ಹಣದ ದಾಖಲೆಗಳನ್ನು ಪರಿಶೀಲಿಸಬೇಕಾಗಿದೆ. ದಾಳಿ ವೇಳೆ ಅವರ ಮನೆಯಲ್ಲಿ ಮುತ್ತು, ವಜ್ರ ಹಾಗೂ ಇತರ ಬೆಲೆಬಾಳುವ ಚಿನ್ನಾಭರಣಗಳು ಸಿಕ್ಕಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೋಹನ್ ಅವರನ್ನು ನಿನ್ನೆ ವಿಜಯವಾಡದ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ ಬಂಧನಕ್ಕೊಪ್ಪಿಸಲಾಯಿತು. ಅಧಿಕಾರಿಗಳು ವಿಜಯವಾಡ, ಅನಂತಪುರ, ಕಡಪ, ಬಳ್ಳಾರಿ, ಮೇದಕ್, ನೆಲ್ಲೂರು, ಪ್ರಕಾಸಂ ಹಾಗೂ ಹೈದರಾಬಾದಿನಲ್ಲಿ ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT