ಡಿಎಂಕೆ ಖಜಾಂಜಿ ಮತ್ತು ತಮಿಳುನಾಡು ಪ್ರತಿಪಕ್ಷ ನಾಯಕ ಎಂ.ಕೆ.ಸ್ಟಾಲಿನ್ 
ದೇಶ

ವಜಾಗೊಂಡ ಸಂಸದೆ ಶಶಿಕಲಾ ಪುಷ್ಪ ಆರೋಪಕ್ಕೆ ಮುಖ್ಯಮಂತ್ರಿ ಜಯಲಲಿತಾ ಪ್ರತಿಕ್ರಿಯೆ ನೀಡಬೇಕು: ಸ್ಟಾಲಿನ್

ನಾಯಕರೊಬ್ಬರು ಕಪಾಳ ಮೋಕ್ಷ ಮಾಡಿದ್ದಾರೆ ಎಂದು ವಜಾಗೊಂಡ ಎಡಿಎಂಕೆ ರಾಜ್ಯಸಭಾ ಸಂಸದೆ ಶಶಿಕಲಾ ಪುಷ್ಪ ಮಾಡಿರುವ ...

ಇರೊಡ್(ತಮಿಳುನಾಡು): ನಾಯಕರೊಬ್ಬರು ಕಪಾಳ ಮೋಕ್ಷ ಮಾಡಿದ್ದಾರೆ ಎಂದು ವಜಾಗೊಂಡ ಎಡಿಎಂಕೆ ರಾಜ್ಯಸಭಾ ಸಂಸದೆ ಶಶಿಕಲಾ ಪುಷ್ಪ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಡಿಎಂಕೆ ಹಿರಿಯ ನಾಯಕ ಎಂ.ಕೆ.ಸ್ಟಾಲಿನ್ ಅವರು ಮುಖ್ಯಮಂತ್ರಿ ಜಯಲಲಿತಾ ಅವರನ್ನು ಒತ್ತಾಯಿಸಿದ್ದಾರೆ.
ರಾಜ್ಯಸಭಾ ಸದನದಲ್ಲಿ ಸಂಸದೆ ಶಶಿಕಲಾ ಪುಷ್ಪಾರವರು, ತಮಗೆ ನಾಯಕರೊಬ್ಬರು ಹೊಡೆದಿದ್ದಾರೆ ಎಂದು ನಿನ್ನೆ ಆರೋಪ ಮಾಡಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಪ್ರತಿಕ್ರಿಯೆ ನೀಡಬೇಕು ಎಂದು ಸ್ಟಾಲಿನ್ ಹೇಳಿದರು.
ನಿನ್ನೆ ರಾಜ್ಯಸಭೆಯಲ್ಲಿ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸದನದ ಬಾವಿಗಿಳಿದ ಸಂಸದೆ ಶಶಿಕಲಾ ಪುಷ್ಪ, ತಮಗೆ ಹೇಳಿಕೆ ನೀಡಲು ಅವಕಾಶ ನೀಡಬೇಕೆಂದು ಸಭಾಪತಿಗಳಿಗೆ ಮನವಿ ಮಾಡಿಕೊಂಡರು. ನಂತರ ಹಲವು ಬಾರಿ ಅಳುತ್ತಾ, ತಮಗೆ ತಮಿಳುನಾಡು ಸರ್ಕಾರದಿಂದ ಬೆದರಿಕೆಯಿದ್ದು, ನಾಯಕರೊಬ್ಬರು ಹೊಡೆದಿದ್ದಾರೆ ಎಂದು ಆಪಾದಿಸಿದ್ದರು.
ಆದರೆ ಯಾರು ಹೊಡೆದದ್ದು ಮತ್ತು ಯಾವಾಗ ಎಂದು ಶಶಿಕಲಾ ಹೇಳಿರಲಿಲ್ಲ. ಈ ಬಗ್ಗೆ ನಿನ್ನೆ ರಾಜ್ಯಸಭೆಯಲ್ಲಿ ಶಶಿಕಲಾ, ಸಂಸದರೊಬ್ಬರು ನಾಯಕರಿಂದ ಪೆಟ್ಟು ತಿನ್ನಬೇಕಾದ ಪರಿಸ್ಥಿತಿ ಬಂದರೆ ಮನುಷ್ಯನಿಗೆಲ್ಲಿದೆ ಗೌರವ ಎಂದು ಪ್ರಶ್ನಿಸಿದರು. ಇದಕ್ಕೆ ಅವರದೇ ಪಕ್ಷ ಎಡಿಎಂಕೆ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
ನಿನ್ನೆ ಸಂಜೆಯ ಹೊತ್ತಿಗೆ ಹೇಳಿಕೆ ನೀಡಿದ ಮುಖ್ಯಮಂತ್ರಿ ಜಯಲಲಿತಾ, ಶಶಿಕಲಾ ಪುಷ್ಪ ಅವರು ಪಕ್ಷಕ್ಕೆ ಅವಮಾನ ಉಂಟುಮಾಡಿದ್ದರಿಂದ ಅವರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ ಎಂದು ಹೇಳಿದ್ದರು.
ಕಳೆದ ವಾರ ಶಶಿಕಲಾ ಪುಷ್ಪಾ ಡಿಎಂಕೆ ಸಂಸದ ಟಿರುಚಿ ಶಿವಾ ಅವರೊಂದಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಗಲಾಟೆ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT