ಆನಂದಿ ಬೆನ್ ಪಟೇಲ್ 
ದೇಶ

ಆನಂದಿ ಬೆನ್ ಉತ್ತರಾಧಿಕಾರಿ ಯಾರು? ನಿತೀನ್ ಪಟೇಲ್ ಅಥವಾ ಸೌರಭ್ ಪಟೇಲ್

ಗುಜರಾತ್ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಅವರು ಮುಖ್ಯಮಂತ್ರಿ ಹುದ್ದೆಯಿಂದ ಹಿಂದೆ ಸರಿಯುತ್ತಿದ್ದು, ಆನಂದಿಬೆನ್ ನಂತರ ಗುಜರಾತ್ ನ ಮುಂದಿನ ಸಿಎಂ...

ಅಹಮದಾಬಾದ್: ಗುಜರಾತ್ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಅವರು ಮುಖ್ಯಮಂತ್ರಿ ಹುದ್ದೆಯಿಂದ ಹಿಂದೆ ಸರಿಯುತ್ತಿದ್ದು, ಆನಂದಿಬೆನ್ ನಂತರ ಗುಜರಾತ್ ನ ಮುಂದಿನ ಸಿಎಂ ಯಾರಾಗಬಹುದು ಎಂಬ ಕುತೂಹಲ ಇದೀಗ ಗರಿಗೇದರಿದೆ. 
ನವೆಂಬರ್ ತಿಂಗಳಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ತಾವು ರಾಜಿನಾಮೆ ನೀಡುತ್ತಿರುವುದಾಗಿ ಹೈ ಕಮಾಂಡ್ ಗೆ ಆನಂದಿ ಬೆನ್ ವಿನಂತಿಸಿಕೊಂಡಿದ್ದಾರೆ. ಈ ಮೂಲಕ ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಉಕ್ಕಿನ ಮಹಿಳೆ ಖ್ಯಾತಿಯ ಪಟೇಲ್ ಗುಜರಾತ್ ಚುನಾವಣೆಗೆ ಇನ್ನು 17 ತಿಂಗಳು ಇರುವಂತೆ ಸ್ಥಾನ ತ್ಯಜಿಸಿದ್ದಾರೆ. 
ಇದೀಗ ಆನಂದಿ ಬೆನ್ ಉತ್ತರಾಧಿಕಾರಿ ಯಾರಾಗಬಹುದು ಎಂಬ ಬಗ್ಗೆ ಕುತೂಹಲಗಳು ಗರಿಗೆದರಿದ್ದು, ಆರೋಗ್ಯ ಸಚಿವರಾದ ನಿತಿನ್ ಪಟೇಲ್, ಸೌರಭ್ ಪಟೇಲ್, ಗುಜರಾತ್ ಬಿಜೆಪಿ ರಾಜ್ಯಾಧ್ಯಕ್ಷ ವಿಜಯ್ ಭಾಯಿ ರೂಪಾಣಿ, ಕೇಂದ್ರ ಮಂತ್ರಿ ಪುರುಷೋತ್ತಮ ರೂಪಾಲ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ. ಇವರ ಪೈಕಿ ನಿತಿನ್ ಪಟೇಲ್ ಮತ್ತು ಸೌರಭ್ ಪಟೇಲ್ ಅವರು ಹೆಸರು ಮುಂಚೂಣಿಯಲ್ಲಿವೆ. 
ಆನಂದಿ ಬೆನ್ ರಾಜಿನಾಮೆ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಪಕ್ಷದ ಮುಖಂಡರೊಂದಿಗೆ ಸಂಪರ್ಕಿಸಿ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು. 
ಪಟೇಲ್ ಮೀಸಲಾತಿ ಚಳವಳಿ, ದಲಿತ ದೌರ್ಜನ್ಯ ಪ್ರಕರಣಗಳಿಂದಾಗಿ ಗುಜರಾತ್ ನಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಠಿಯಾಗಿದೆ. ಇದರಿಂದಾಗಿ 2017ರಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ಮೇಲೆ ಪ್ರಭಾವ ಬೀರಲಿದ್ದು, ಬಿಜೆಪಿಗೆ ತೀವ್ರ ಸಂಕಷ್ಟ ಎದುರಾಗಿದೆ. ಈ ಮಧ್ಯೆ ಚುನಾವಣೆ ದೃಷ್ಠಿಯಿಂದಾಗಿ ನಾಯಕತ್ವದ ಬದಲಾವಣೆ ಅವಶ್ಯಕತೆ ಹೆಚ್ಚಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತವರಾಗಿರುವ ಗುಜರಾತ್ ನಲ್ಲಿ ಸದ್ಯ ಆಡಳಿತ ವಿರೋಧಿ ಅಲೆ ಹೆಚ್ಚಾಗಿದ್ದು, ಇದನ್ನು ಮೆಟ್ಟಿ ನಿಲ್ಲುವಂತ ನಾಯಕನ ಆಯ್ಕೆಗೆ ಬಿಜೆಪಿ ಕಸರತ್ತು ನಡೆಸುತ್ತಿದೆ. ಗುಜರಾತ್ ಚುನಾವಣೆ ಮುಂದಿನ ಲೋಕಸಭೆ ಚುನಾವಣೆ ಮೇಲೂ ಪ್ರಭಾವ ಬೀರುವ ಸಾಧ್ಯತೆಗಳು ದಟ್ಟವಾಗಿರುವುದರಿಂದ ಬಿಜೆಪಿ ಎಚ್ಚರಿಕೆಯ ಹೆಜ್ಜೆ ಇಡಬೇಕಿದೆ.
ಆನಂದಿ ಬೆನ್ ಪಟೇಲ್ ಅವರು ರಾಜಿನಾಮೆ ನೀಡುವ ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿ ತಮ್ಮ ಫೇಸ್ ಬುಕ್ ಮೂಲಕ ಬಿಜೆಪಿ ಹೈಕಮಾಂಡ್ ಗೆ ಮನವಿ ಮಾಡಿಕೊಂಡಿದ್ದರು. ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆ ಹೊಸ ನಾಯಕತ್ವ ವಹಿಸಿಕೊಳ್ಳುವವರಿಗೆ ಹೆಚ್ಚಿನ ಸಮಯಾವಕಾಶ ಸಿಗಲಿದೆ ಎಂದು ಆನಂದಿ ಬೆನ್ ಅಭಿಪ್ರಾಯ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!