ದೇಶ

ಜಮ್ಮು: ಶಿಕ್ಷಣ ಸಚಿವ ನಹೀಂ ಅಖ್ತರ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

Vishwanath S
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶಿಕ್ಷಣ ಸಚಿವ ನಹೀಂ ಅಖ್ತರ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 
ಶ್ರೀನಗರ ಪರ್ರಯಪೊರ ಪ್ರದೇಶದಲ್ಲಿರುವ ನಯೀಂ ಅಖ್ತರ್ ಅವರ ನಿವಾಸದ ಮೇಲೆ ಕಳೆದ ರಾತ್ರಿ ದುಷ್ಕರ್ಮಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ದಾಳಿಯಿಂದ ಮನೆಯ ಮುಖ್ಯದ್ವಾರಕ್ಕೆ ಸ್ವಲ್ಪ ಹಾನಿಯಾಗಿದೆ. ಆದರೆ ಯಾರಿಗೆ ತೊಂದರೆಯಾಗಿಲ್ಲ. ಘಟನೆ ನಡೆದ ಸಂದರ್ಭದಲ್ಲಿ ಅಖ್ತರ್ ಮತ್ತು ಅವರ ಪತ್ನಿ ಮನೆಯಲ್ಲಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. 
ಕಳೆದ ಮಾರ್ಚ್ ನಲ್ಲಿ ಪಿಡಿಪಿ ಮತ್ತು ಬಿಜೆಪಿ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಗುಪ್ಕರ್ ರೋಡ್ ನಲ್ಲಿರುವ ನಿವಾಸಕ್ಕೆ ಸ್ಥಳಾಂತರಗೊಂಡಿದ್ದರು. ಅಖ್ತರ್ ನಿವಾಸ ಹೊರತು ಪಡೆಸಿ ಬೇಮನಿಯಾ ಪ್ರದೇಶದ ಕೆಲವೊಂದು ಕಚೇರಿಗಳು ಮತ್ತು ಸರ್ಕಾರಿ ಕಟ್ಟಡಗಳ ಮೇಲೆ ಸಹ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ.
SCROLL FOR NEXT