ಅರುಣ್ ಜೇಟ್ಲಿ 
ದೇಶ

ಬೆಲೆ ಏರಿಕೆಗೆ ಕಾಳಸಂತೆಯೇ ಪ್ರಧಾನ ಕಾರಣವಲ್ಲ: ಅರುಣ್ ಜೇಟ್ಲಿ

ಆಹಾರ ಹಣದುಬ್ಬರಕ್ಕೆ ಕಾಳಸಂತೆಯೇ ಪ್ರಧಾನ ಕಾರಣವಲ್ಲ ಎಂದಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಬೇಡಿಕೆ ಮತ್ತು ಪೂರೈಕೆ ನಡುವಿನ ವ್ಯತ್ಯಾಸ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಪ್ರವೃತ್ತಿಯ ಅಂಶಗಳೂ ಕಾರಣವಾಗಲಿವೆ

ನವದೆಹಲಿ: ಆಹಾರ ಹಣದುಬ್ಬರಕ್ಕೆ ಕಾಳಸಂತೆಯೇ ಪ್ರಧಾನ ಕಾರಣವಲ್ಲ ಎಂದಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಬೇಡಿಕೆ ಮತ್ತು ಪೂರೈಕೆ ನಡುವಿನ ವ್ಯತ್ಯಾಸ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಪ್ರವೃತ್ತಿಯ ಅಂಶಗಳೂ ಕಾರಣವಾಗಲಿವೆ ಎಂದು ಹೇಳಿದ್ದಾರೆ.

ಅಗತ್ಯ ಪದಾರ್ಥಗಳ ಬೆಲೆ ಏರಿಕೆ ಹಾಗೂ ಆಹಾರ ಹಣದುಬ್ಬರಕ್ಕೆ ಕಾರಣವಾಗುವ ಅಂಶಗಳಲ್ಲಿ ಕಾಳಸಂತೆಯೂ ಸಹ ಒಂದು, ಆಹಾರ ಪದಾರ್ಥಗಳ ಬೆಲೆ ಏರಿಕೆಗೆ ಹಲವು ಕಾರಣಗಳಿವೆ ಎಂದು ಲೋಕಸಭೆಯಲ್ಲಿ ಅರುಣ್ ಜೇಟ್ಲಿ ತಿಳಿಸಿದ್ದಾರೆ. ಆಹಾರ ಹಣದುಬ್ಬರಕ್ಕೆ ಕಾರಣವಾಗಿರುವ ಅಂಶಗಳ ಬಗ್ಗೆ ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿರುವ ಅರುಣ್ ಜೇಟ್ಲಿ, ಹಲವು ಅಧ್ಯಯನ ವರದಿಗಳ ಉದಾಹರಣೆ ನೀಡಿ, ವಿತ್ತೀಯ ಕೊರತೆ, ಜಾಗತಿಕ ಆಹಾರ ಹಣದುಬ್ಬರ, ಸ್ಥಳೀಯ ವೇತನ ಗಳು ಭಾರತದಲ್ಲಿ ಆಹಾರ ಹಣದುಬ್ಬರಕ್ಕೆ ಕಾರಣವಾಗುತ್ತಿರುವ ಅಂಶಗಳೆಂದು ತಿಳಿಸಿದ್ದಾರೆ. ಬೇರೆ ಅಂಶಗಳ ಹೊರತಾಗಿಯೂ ಕೇಂದ್ರ ಸರ್ಕಾರ ಆಹಾರ ಹಣದುಬ್ಬರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿದೆ ಎಂದು ಅರುಣ್ ಜೇಟ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT