ಡಿಜಿಟಲ್ ಇಂಡಿಯಾ ಕಾರ್ಯಕ್ರಮದಲ್ಲಿ ಕೇಂದ್ರ ಮಾಹಿತಿ, ತಂತ್ರಜ್ಞಾನ ಸಚಿವ ರವಿಶಂಕರ ಪ್ರಸಾದ್. 
ದೇಶ

ಡಿಜಿಟಲ್ ಪ್ರಜಾಪ್ರಭುತ್ವ ಭಾರತಕ್ಕೆ ಅಗತ್ಯ: ರವಿಶಂಕರ್ ಪ್ರಸಾದ್

ಡಿಜಿಟಲ್ ಪ್ರಜಾಪ್ರಭುತ್ವ ಭಾರತ ದೇಶಕ್ಕೆ ಅತ್ಯಂತ ಅಗತ್ಯವಾಗಿದ್ದು, ಅದರ ಪ್ರದರ್ಶನಕ್ಕೆ ಮೈಗೊವ್...

ನವದೆಹಲಿ: ಡಿಜಿಟಲ್ ಪ್ರಜಾಪ್ರಭುತ್ವ ಭಾರತ ದೇಶಕ್ಕೆ ಅತ್ಯಂತ ಅಗತ್ಯವಾಗಿದ್ದು, ಅದರ ಪ್ರದರ್ಶನಕ್ಕೆ MyGovIndia ಅತ್ಯಂತ ದೊಡ್ಡ ವೇದಿಕೆಯಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಶನಿವಾರ ಹೇಳಿದ್ದಾರೆ.
ಎರಡು ವರ್ಷಗಳಲ್ಲಿ ಡಿಜಿಟಲ್ ಮಾಧ್ಯಮದ ಮೂಲಕ ಪಾಲ್ಗೊಳ್ಳುವಿಕೆಯ ಪ್ರಜಾಪ್ರಭುತ್ವಕ್ಕೆ MyGovIndia ಒಂದು ಉದಾಹರಣೆಯಾಗಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದ MyGovIndia ವೇದಿಕೆಯ ಎರಡನೇ ವರ್ಷಾಚರಣೆ ಸಂದರ್ಭದಲ್ಲಿ "The Spirit of Participatory Democracy with MyGov" ಎಂಬ ಸಮ್ಮೇಳನವನ್ನು ಉದ್ಘಾಟಿಸಿ ಅವರು ಹೀಗೆ ಹೇಳಿದರು.
ಎನ್ ಡಿಎ ಸರ್ಕಾರಕ್ಕೆ ಎರಡು ವರ್ಷವಾದ ಹಿನ್ನೆಲೆಯಲ್ಲಿ ವರ್ಷಾಚರಣೆಯನ್ನು ಸುಲಭವಾಗಿ ಯಾವುದಾದರೊಂದು ಹೊಟೇಲ್ ನಲ್ಲಿ ಮಾಡಬಹುದು. ಆದರೆ ಪ್ರಧಾನಿ ಮೋದಿಯವರು ನಮಗೆ ದೇಶದ ವಿವಿಧ ಭಾಗಗಳಿಗೆ ಭೇಟಿ ನೀಡಿ ಜನರೊಂದಿಗೆ ಸಂವಾದ ನಡೆಸುವಂತೆ ಹೇಳಿದ್ದಾರೆ. ನಾವು ಜನರೊಂದಿಗೆ ಡಿಜಿಟಲಿಯಾಗಿ ಮತ್ತು ವೈಯಕ್ತಿಕವಾಗಿ ಸಂಪರ್ಕದಲ್ಲಿರಬೇಕು ಎಂದು ಹೇಳಿದರು.
ಸರ್ಕಾರದ ಸಚಿವರೊಂದಿಗೆ ನೇರವಾಗಿ ಸಂವಾದ ನಡೆಸಲು, ಉತ್ತಮ ಆಡಳಿತ ನಡೆಸಲು ಸರ್ಕಾರಕ್ಕೆ ಸಲಹೆ ನೀಡಲು ಮೈ ಗವರ್ನ್ ಮೆಂಟ್ ಅಭಿಯಾನವನ್ನು ಎರಡು ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಆರಂಭಿಸಿತ್ತು.
ಇದರಡಿ ಗಂಗಾ ನದಿ ಸ್ವಚ್ಛತೆ, ಹೆಣ್ಣು ಮಕ್ಕಳ ಶಿಕ್ಷಣ, ಡಿಜಿಟಲ್ ಇಂಡಿಯಾ, ಆಹಾರ ಭದ್ರತೆ ಮತ್ತು ಆರೋಗ್ಯ ಭಾರತ ಮೊದಲಾದ ಗುಂಪುಗಳಿದ್ದು, ಸಾರ್ವಜನಿಕರು MyGovIndia ಸೈಟ್ ನಲ್ಲಿ ತಮ್ಮ ಅಭಿಪ್ರಾಯ, ಸಲಹೆ-ಸೂಚನೆಗಳನ್ನು ನೀಡಬಹುದು. MyGovIndia ನಲ್ಲಿ ಪ್ರಸ್ತುತ 3.52 ದಶಲಕ್ಷ ಸದಸ್ಯರು ದಾಖಲಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT