ಶರದ್ ಯಾದವ್ 
ದೇಶ

ಕನ್ವರ್ ಯಾತ್ರೆ ಕೆಲಸವಿಲ್ಲದವರು ಮಾಡುವ ಕೆಲಸ: ಶರದ್ ಯಾದವ್

ಸಂಯುಕ್ತ ಜನತಾ ದಳ ಜೆಡಿಯು ಮುಖಂಡ ಶರದ್ ಯಾದವ್ ಕನ್ವರ್ ಯಾತ್ರೆಯನ್ನು ಟೀಕಿಸಿದ್ದು, ಕೆಲಸವಿಲ್ಲದವರು ಮಾಡುವ ಯಾತ್ರೆ ಎಂದು ಹೇಳಿದ್ದಾರೆ.

ನವದೆಹಲಿ: ಸಂಯುಕ್ತ ಜನತಾ ದಳ (ಜೆಡಿಯು) ಮುಖಂಡ ಶರದ್ ಯಾದವ್ ಕನ್ವರ್ ಯಾತ್ರೆಯನ್ನು ಟೀಕಿಸಿದ್ದು, ಕೆಲಸವಿಲ್ಲದವರು ಮಾಡುವ ಯಾತ್ರೆ ಎಂದು ಹೇಳಿದ್ದಾರೆ. ಶರದ್ ಯಾದವ್ ಅವರ ಈ ಹೇಳಿಕೆ ಶಿವ ಭಕ್ತರಿಗೆ ಅವಮಾನ ಮಾಡುವಂತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಸಾವಿರಾರು ಜನರ ಗುಂಪು ದೇಶದಲ್ಲಿ ನಿರುದ್ಯೋಗವಿದೆ ಎಂಬುದನ್ನು ತೋರಿಸುತ್ತದೆ ಎಂದು ಜೆಡಿಯು ಮುಖಂಡ ಶರದ್ ಯಾದವ್ ತಿಳಿಸಿದ್ದಾರೆ. ಉದ್ಯೋಗವಿದ್ದಿದ್ದರೆ ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯೂ ಕಡಿಮೆ ಇರುತ್ತಿತ್ತು ಎಂದು ಶರದ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.

ಪವಿತ್ರ ಶ್ರಾವಣ ಮಾಸದಲ್ಲಿ ಶಿವನಿಗೆ ಗಂಗಾ ನದಿಯ ನೀರಿನಿಂದ ಪೂಜೆ ಸಲ್ಲಿಸುವ ಮೂಲಕ ಕನ್ವರ್ ಯಾತ್ರೆ ನಡೆಸಲಾಗುತ್ತದೆ. ಆದರೆ ಇದನ್ನು ನಿರುದ್ಯೋಗಕ್ಕೆ ತಾಲೂಕು ಹಾಕುವ ಮೂಲಕ ಶಿವ ಭಕ್ತರಿಗೆ ಶರದ್ ಯಾದವ್ ಅವಮಾನ ಮಾಡಿದ್ದಾರೆ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

ಹಳ್ಳ ಹಿಡೀತಾ ಸಂಧಾನ ಮಾತುಕತೆ?: ಹಾರ್ಮೊಜ್ ದಾಟಿದ ಅಮೆರಿಕದ 2 ಯುದ್ಧ ನೌಕೆಗಳು!

ಒಂದು ಕಡೆ ಪಾಕಿಸ್ತಾನದಲ್ಲಿ ಶಾಂತಿ ಮಾತುಕತೆ, ಮತ್ತೊಂದು ಕಡೆ ಲೆಬನಾನ್‌ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

SCROLL FOR NEXT