ಜಗದೀಶ್ ಗಗನೇಜಾ 
ದೇಶ

ಪಂಜಾಬ್ ನಲ್ಲಿ ಆರ್ ಎಸ್ ಎಸ್ ನಾಯಕನ ಮೇಲೆ ದಾಳಿ: ಎಸ್ ಐಟಿ ರಚನೆ

ಜಲಂಧರ್ ನಲ್ಲಿ ಆರ್ ಎಸ್ ಎಸ್ ನ ಮುಖಂಡ ಜಗದೀಶ್ ಗಗನೇಜಾ ಅವರ ಮೇಲೆ ಗುಂಡಿನ ದಾಳಿ ನಡೆದ ಪ್ರಕರಣದ ತನಿಖೆಯನ್ನು ನಡೆಸಲು ಪಂಜಾಬ್ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ.

ಚಂಡೀಗಢ: ಜಲಂಧರ್ ನಲ್ಲಿ ಆರ್ ಎಸ್ ಎಸ್ ನ ಮುಖಂಡ ಜಗದೀಶ್ ಗಗನೇಜಾ ಅವರ ಮೇಲೆ ಗುಂಡಿನ ದಾಳಿ ನಡೆದ ಪ್ರಕರಣದ ತನಿಖೆಯನ್ನು ನಡೆಸಲು ಪಂಜಾಬ್ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. 
ಭಾರತೀಯ ಸೇನೆಯ ಮಾಜಿ ಅಧಿಕಾರಿಯೂ ಆಗಿರುವ ಜಗದೀಶ್ ಗಗನೇಜಾ ಅವರ ಮೇಲೆ ಜಲಂಧರ್ ನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಶಸ್ತ್ರ ಚಿಕಿತ್ಸೆ ನಡೆಸಿ ದೇಹಕ್ಕೆ ಹೊಕ್ಕಿದ್ದ ಎರಡು ಗುಂಡುಗಳನ್ನು ಹೊರತೆಗೆಯಲಾಗಿದ್ದು, ಜಗದೀಶ್ ಗಗನೇಜಾ ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಜಗದೀಶ್ ಗಗನೇಜಾ ಅವರು ತಮ್ಮ ಪತ್ನಿಯೊಂದಿಗೆ ಕಾರಿನಲ್ಲಿ ತೆರಳುತ್ತಿರಬೇಕಾದರೆ ಮುಸುಕುಧಾರಿಗಳಿಬ್ಬರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಆರ್ ಎಸ್ ಎಸ್ ನ ಮುಖಂಡರ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿರುವ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸುವಂತೆ ಸೂಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT