ಸಂಸತ್ ಭವನ 
ದೇಶ

ಲೋಕಸಭೆಯಲ್ಲಿ ಮಹತ್ವದ ಜಿಎಸ್ ಟಿ ತಿದ್ದುಪಡಿ ವಿಧೇಯಕ ಅಂಗೀಕಾರ

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಡಿಸಿದ್ದ ಮಹತ್ವದ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ತಿದ್ದುಪಡಿ ವಿಧೇಯಕಕ್ಕೆ ಸೋಮವಾರ ಲೋಕಸಭೆ...

ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಡಿಸಿದ್ದ ಮಹತ್ವದ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ತಿದ್ದುಪಡಿ ವಿಧೇಯಕಕ್ಕೆ ಸೋಮವಾರ ಲೋಕಸಭೆ ಅಂಗೀಕಾರ ನೀಡಿದೆ.
ಕಳೆದ ವಾರ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದ ಜಿಎಸ್ ಟಿ ತಿದ್ದುಪಡಿ ವಿಧೇಯಕನ್ನು ಅರುಣ್‌ ಜೇಟ್ಲಿ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿದರು. ಬಳಿಕ ತೀವ್ರ ಚರ್ಚೆಯ ನಂತರ ವಿಧೇಯಕವನ್ನು ಮತಕ್ಕೆ ಹಾಕಲಾಯಿತು. ಈ ವೇಳೆ ಸದನದಲ್ಲಿ ಹಾಜರಿದ್ದ ಎಲ್ಲಾ 427 ಸದಸ್ಯರೂ ವಿಧೇಯಕದ ಪರವಾಗಿ ಮತ ಚಲಾಯಿಸಿದರು. ಆದರೆ ಜಿಎಸ್ ಟಿ ವಿರೋಧಿಸಿ ಎಐಎಡಿಎಂಕೆ ಸದಸ್ಯರು ಸದನದಿಂದ ಹೊರ ನಡೆದರು.
ಇದರೊಂದಿಗೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಜಿಎಸ್ ಟಿ ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸದಂತಾಗಿದೆ.
ಇದಕ್ಕೂ ಮುನ್ನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಜಿಎಸ್‌ಟಿ ಜಾರಿಯಿಂದಾಗಿ ಟ್ಯಾಕ್ಸ್ ಟೆರರಿಸಂಗೆ ತೆರೆ ಬೀಳಲಿದೆ ಮತ್ತು ಇನ್ನುಮುಂದೆ ಗ್ರಾಹಕನೇ ದೊರೆ ಎಂದು ಹೇಳಿದ್ದರು. ಅಲ್ಲದೆ ಜಿಎಸ್ ಟಿ ವಿಧೇಯಕ ಅಂಗೀಕಾರಕ್ಕೆ ಸಹಕರಿಸಿದ ಎಲ್ಲಾ ರಾಜಕೀಯ ಪಕ್ಷಗಳಿಗೆ ಧನ್ಯವಾದ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT