ಆರ್ ಎಸ್ಎಸ್ ಚಿಂತಕ ರಾಕೇಶ್ ಸಿನ್ಹಾ(ಸಂಗ್ರಹ ಚಿತ್ರ) 
ದೇಶ

ದಲಿತರ ಮೇಲೆ ಹಲ್ಲೆ ಮಾಡುವವರು ದೇಶ ವಿರೋಧಿಗಳು: ಆರ್ ಎಸ್ಎಸ್

ದಲಿತರ ವಿರುದ್ಧ ಗೋ ರಕ್ಷಕರು ದೌರ್ಜನ್ಯ ನಡೆಸಿರುವುದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಖಂಡಿಸಿರುವ ಬೆನ್ನಲ್ಲೇ...

ನವದೆಹಲಿ: ದಲಿತರ ವಿರುದ್ಧ ಗೋ ರಕ್ಷಕರು ದೌರ್ಜನ್ಯ ನಡೆಸಿರುವುದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಖಂಡಿಸಿರುವ ಬೆನ್ನಲ್ಲೇ, ಆರ್ಎಸ್ಎಸ್ ಚಿಂತಕ ರಾಕೇಶ್ ಸಿನ್ಹಾ ಮಾತನಾಡಿ, ದಲಿತ ಸಮುದಾಯದವರನ್ನು ಒಗ್ಗೂಡಿಸಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಬಲ ಪಂಥೀಯ ಹಿಂದೂ ರಾಷ್ಟ್ರೀಯವಾದಿ ಗುಂಪುಗಳು ಉತ್ತಮ ಸೇವೆ ಮಾಡುತ್ತಿವೆ ಎಂದು ಹೇಳಿದ್ದಾರೆ. ಅಲ್ಲದೆ ದಲಿತರ ಮೇಲೆ ಹಲ್ಲೆ ನಡೆಸುವವರು ದೇಶ ವಿರೋಧಿಗಳು ಎಂದು ಪ್ರಧಾನಿ ಮಾತಿಗೆ ದನಿಗೂಡಿಸಿದ್ದಾರೆ.
ನಮ್ಮ ದೇಶದಲ್ಲಿ ದಲಿತರ ವಿರುದ್ಧ ದೌರ್ಜನ್ಯ ನಡೆಸುವವರಿಗೆ ಪ್ರಧಾನಿಯವರು ಸರಿಯಾದ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಗೃತಿ, ಸಮಾಜ ಸೇವೆ ಮೂಲಕ ದಲಿತರನ್ನು ನಮ್ಮ ಸಮಾಜದ ಮುಖ್ಯ ವಾಹಿನಿಗೆ ತಂದು ಅವರನ್ನು ಒಗ್ಗೂಡಿಸಲು ಆರ್ ಎಸ್ಎಸ್ ನಿರತವಾಗಿದೆ ಎಂದು ಸಿನ್ಹ ಎಎನ್ಐ ಸುದ್ದಿಸಂಸ್ಥೆಗೆ ತಿಳಿಸಿದರು.
ಗುಜರಾತ್ ನ ಗಿರ್ ಸೋಮನಾಥ್ ಜಿಲ್ಲೆಯ ಉನಾದಲ್ಲಿ ದಲಿತ ಯುವಕರ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಮಾತನಾಡಿದ ಸಿನ್ಹಾ, ಘಟನೆ ನಡೆದ ಬಳಿಕ ಆರ್ ಎಸ್ಎಸ್ ಮೊದಲಿಗೆ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು ಎಂದು ಪ್ರತಿಪಾದಿಸಿದರು.
''ಆರ್ ಎಸ್ಎಸ್ ನಾಯಕರು ಉನಾಕ್ಕೆ ಭೇಟಿ ನೀಡಿದ್ದರು. ಆಗಸ್ಟ್ 3ರಂದು ಉನಾದಲ್ಲಿ ಆರ್ಎಸ್ಎಸ್ ದೊಡ್ಡ ಸಮ್ಮೇಳನವನ್ನು ಮಾಡಿತ್ತು. ದಲಿತರ ವಿರುದ್ಧ ಹಿಂಸೆ ಮಾಡಿದವರು ದೇಶದ ಹಿಂದುತ್ವಕ್ಕೆ ಯಾವುದೇ ಸೇವೆ ಸಲ್ಲಿಸಲು ಸಾಧ್ಯವಿಲ್ಲ ಎಂದರು.ದಲಿತರ ಮೇಲೆ ಹಲ್ಲೆ ಮಾಡುವವರು ದೇಶದ ರಾಷ್ಟ್ರೀಯತೆಗೆ ಧಕ್ಕೆ ತರುತ್ತಾರೆ ಎಂದರು.
ಗೋವುಗಳನ್ನು ರಕ್ಷಿಸುವುದು ತಮ್ಮ ಧಾರ್ಮಿಕ, ನೈತಿಕ, ಪ್ರಜಾಸತ್ತಾತ್ಮಕ ಕರ್ತವ್ಯ ಎಂದು ಪ್ರತಿಯೊಬ್ಬ ನಾಗರಿಕರು ಅರ್ಥ ಮಾಡಿಕೊಳ್ಳಬೇಕು. ಗೋವುಗಳನ್ನು ಕೊಲ್ಲುವುದನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರಗಳು ಯಾವುದೇ ನೈತಿಕ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು.
ನಮ್ಮ ದೇಶದಲ್ಲಿ ಸುಮಾರು 30 ಸಾವಿರ ಅಕ್ರಮ ಗೋವು ಕಸಾನೆ ಮನೆಗಳಿವೆ. ಗೋ ಸಂಹಾರದ ವಿರುದ್ಧ ಆರ್ಎಸ್ಎಸ್ ನಡೆಸುತ್ತಿರುವ ಗೋ ಸಂಹಾರ ವಿರೋಧಿ ಜಾಗೃತಿ ಒಂದು ಪ್ರಜಾಸತ್ತಾತ್ಮಕ, ಅಹಿಂಸೆಯ ಚಳವಳಿಯಾಗಬೇಕು ಎಂದು ರಾಕೇಶ್ ಸಿನ್ಹಾ ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT