ಸಾಂದರ್ಭಿಕ ಚಿತ್ರ 
ದೇಶ

ದೇವಾಲಯದಲ್ಲಿ ರಾವಣನ ವಿಗ್ರಹ ಪ್ರತಿಷ್ಠಾಪಿಸಲು ಹಿಂದೂ ಅರ್ಚಕರ ವಿರೋಧ

ದೇವಾಲಯದಲ್ಲಿ ರಾವಣನ ಪ್ರತಿಮೆ ಸ್ಥಾಪಿಸುವುದಕ್ಕೆ ದೇವಾಲಯದ ಮುಖ್ಯ ಅರ್ಚಕ ವಿರೋಧ ವ್ಯಕ್ತ ಪಡಿಸಿರುವ ಘಟನೆ ಗ್ರೇಟರ್ ನೊಯ್ಡಾದ ಬಿಸರಾಕ್ ನಲ್ಲಿ ....

ಗ್ರೇಟರ್ ನೊಯ್ಡಾ: ದೇವಾಲಯದಲ್ಲಿ ರಾವಣನ ಪ್ರತಿಮೆ ಸ್ಥಾಪಿಸುವುದಕ್ಕೆ ದೇವಾಲಯದ ಮುಖ್ಯ ಅರ್ಚಕ ವಿರೋಧ ವ್ಯಕ್ತ ಪಡಿಸಿರುವ ಘಟನೆ ಗ್ರೇಟರ್ ನೊಯ್ಡಾದ ಬಿಸರಾಕ್ ನಲ್ಲಿ ನಡೆದಿದೆ.

ಗಾಜಿಯಾಬಾದ್ ನ ದುದೇಶ್ವರ್ ನಾಥ್ ದೇವಾಲಯದ ಮುಖ್ಯ ಅರ್ಚಕ ಮಹಾಂತ್ ನಾರಾಯಣ ಗಿರಿ ಹಾಗೂ ದಾಸ್ನಾ ದಲ್ಲಿರುವ ಚಂಡಿದೇವಿ ದೇವಾಲಯದ ಮುಖ್ಯ ಅರ್ಚಕ ಯತಿ ನರಿನ್ ಮನ್, ದೇವಾಲಯದಲ್ಲಿ ರಾವಣನ ವಿಗ್ರಹ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ರಾವಣ ದುಷ್ಟ ಶಕ್ತಿಯ ಸಂಕೇತ. ಹೀಗಾಗಿ ಪಶ್ಚಿಮ ಉತ್ತರಪ್ರದೇಶದ ಯಾವ ಭಾಗದಲ್ಲಿಯೂ ರಾವಣನ ಪ್ರತಿಮೆ ಸ್ಥಾಪಿಸಬಾರದು ಎಂದು ಆಗ್ರಹಿಸಿದ್ದಾರೆ.

ಮಹಾತ್ಮ ರಾವಣ ಟೆಂಪಲ್ ಟ್ರಸ್ಟ್ ಮತ್ತು ಶಿವಮೋಹನ್ ದೇವಾಲಯ ಟ್ರಸ್ಟ್ ಸೇರಿ ರಾವಣನ ದೊಡ್ಡ ದೇವಾಲಯ ನಿರ್ಮಿಸುವ ಪ್ರಸ್ತಾಪ ಮಾಡಿತ್ತು. ಅದರಂತೆ ದೇವಾಲಯವನ್ನು ಸಹ ನಿರ್ಮಾಣಮಾಡಲಾಗಿದೆ. ಆಗಸ್ಟ್ 11 ರಂದು ಮಂದಿರದಲ್ಲಿ ರಾವಣನ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಟ್ರಸ್ಟ್ ಹೇಳಿದೆ.

ಆದರೆ ಯಾವುದೇ ಕಾರಣಕ್ಕೂ ರಾವಣನ ಪ್ರತಿಮೆ ಸ್ಥಾಪಿಸಬಾರದೆಂದು ಮುಖ್ಯ ಅರ್ಚಕರು ಪಟ್ಟು ಹಿಡಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT