ಶಶಿಕಲಾ ಪುಷ್ಪ 
ದೇಶ

ಉಚ್ಚಾಟಿತ ಎಐಎಡಿಎಂಕೆ ಸಂಸದೆ, ಪತಿ, ಪುತ್ರನ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲು

ಉಚ್ಚಾಟಿತ ಎಐಎಡಿಎಂಕೆ ನಾಯಕಿ ಶಶಿಕಲಾ ಪುಷ್ಪ ಹಾಗೂ ಅವರ ಪತಿ ಮತ್ತು ಪುತ್ರನ ವಿರುದ್ಧ ಪೊಲೀಸರು ಲೈಂಗಿಕ ಕಿರುಕುಳದ ಕೇಸ್...

ಮದುರೈ: ಉಚ್ಚಾಟಿತ ಎಐಎಡಿಎಂಕೆ ನಾಯಕಿ ಶಶಿಕಲಾ ಪುಷ್ಪ ಹಾಗೂ ಅವರ ಪತಿ ಮತ್ತು ಪುತ್ರನ ವಿರುದ್ಧ ಪೊಲೀಸರು ಲೈಂಗಿಕ ಕಿರುಕುಳದ ಕೇಸ್ ದಾಖಲಿಸಿದ್ದಾರೆ.
ಸಂಸದೆ ಶಶಿಕಲಾ ಹಾಗೂ ಅವರ ಪತಿ ಲಿಂಗೇಶ್ವರ ಮತ್ತು ಪುತ್ರ ಎಲ್ ಪ್ರದೀಪ್ ರಾಜ ಅವರ ವಿರುದ್ಧ ಈ ಹಿಂದೆ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಅಕ್ರಮ ಗೃಹ ಬಂಧನ ಹಾಗೂ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
ಮಹಿಳೆಯ ದೂರು ಆಧರಿಸಿ ಟುಟಿಕೋರಿನ್ ಜಿಲ್ಲೆಯ ಪುದುಕೊಟ್ಟಾಯಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಸಂಸದೆ ಹಾಗೂ ಅವರ ಪತಿ, ಪುತ್ರನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
2011ರಿಂದ 2014ರವರೆಗೆ ಶಶಿಕಲಾ ಅವರು ಟುಟಿಕೋರಿನ್ ಮೇಯರ್ ಆಗಿದ್ದ ವೇಳೆ ತಾನು ಮತ್ತು ತನ್ನ ಸಹೋದರಿ ಇಬ್ಬರೂ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದೇವು. ಈ ವೇಳೆ ನಮಗೆ ಗೃಹ ಬಂಧನ ವಿಧಿಸಲಾಗಿತ್ತು ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಎಂಕೆ ಸಂಸದ ತಿರುಚಿ ಎನ್ ಶಿವ ಅವರಿಗೆ ಕಪಾಳಮೋಕ್ಷ ಮಾಡಿದ್ದ ಶಶಿಕಲಾ ಅವರನ್ನು ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ಅವರು ಪಕ್ಷದಿಂದ ಉಚ್ಚಾಟಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT