ಚೆನ್ನೈ ರೈಲು ದರೋಡೆ ಪ್ರಕರಣದಲ್ಲಿ 'ಒಳಗಿನವರೇ' ಭಾಗಿಯಾಗಿರುವ ಶಂಕೆ 
ದೇಶ

ಚೆನ್ನೈ ರೈಲು ದರೋಡೆ ಪ್ರಕರಣದಲ್ಲಿ 'ಒಳಗಿನವರೇ' ಭಾಗಿಯಾಗಿರುವ ಶಂಕೆ

ತಮಿಳುನಾಡಿನಲ್ಲಿ ಸಿನಿಮೀಯ ರೀತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣದಲ್ಲಿ ಒಳಗಿನವರೇ ಭಾಗಿಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಚೆನ್ನೈ: ತಮಿಳುನಾಡಿನಲ್ಲಿ ಸಿನಿಮೀಯ ರೀತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣದಲ್ಲಿ ಒಳಗಿನವರೇ ಭಾಗಿಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ತನಿಖೆ ನಡೆಸುತ್ತಿರುವ ತಮಿಳುನಾಡು ಪೊಲೀಸರು, ಪ್ರಕರಣದಲ್ಲಿ ಒಳಗಿನವರದ್ದೇ ಕೈವಾಡ ಇದೆ ಎಂಬ ಅನುಮಾನ ವ್ಯಕ್ತಪಡಿಸಿದ್ದು, ಪ್ರಕರಣದ ಸಂಬಂಧ ವಿಚಾರಣೆ ಎದುರಿಸುವಂತೆ ಹಲವು  ಬ್ಯಾಂಕ್ ನೌಕರರಿಗೆ ತನಿಖಾಧಿಕಾರಿಗಳು ಸೂಚಿಸಿದ್ದಾರೆ.  ಇಂಡಿಯನ್ ಓವರ್ ಸೀಸ್ ಬ್ಯಾಂಕ್, ಎಸ್ ಬಿಐ ಸೇರಿದಂತೆ ಇನ್ನೂ ಅನೇಕ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಅಧಿಕಾರಿಗಳು/ ನೌಕರರಿಗೆ ತನಿಖಾಧಿಕಾರಿಗಳು ಸೂಚನೆ ನೀಡಿದ್ದಾರೆ.  ದರೋಡೆಕೋರರು ರೈಲಿನ ಮೇಲಿನಿಂದಲೇ ಗ್ಯಾಸ್ ಕಟ್ಟರ್ ಬಳಸಿ ಬೋಗಿಯ ಒಳಗೆ ಇಳಿದು 5.78 ಕೋಟಿ ರುಪಾಯಿ ಹಣವನ್ನು ದೋಚಿದ್ದರು. ಸುಮಾರು 5 ಬ್ಯಾಂಕ್ ಗಳ ಹಳೇ ನೋಟುಗಳನ್ನು ರೈಲಿನಲ್ಲಿ ಸಾಗಿಸಲಾಗುತ್ತಿತ್ತು. ರೈಲು ನಿಲ್ದಾಣಕ್ಕೆ ಬಂದು ನಿಂತಾಗ ಬಾಕ್ಸ್ ಗಳೆಲ್ಲಾ ಖಾಲಿಯಾಗಿದ್ದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT