ನಕಲಿ ಗೋರಕ್ಷಕರನ್ನು ಪತ್ತೆ ಮಾಡಲು ಹರ್ಯಾಣ ಸರ್ಕಾರದ ಹೊಸ ಯೋಜನೆ 
ದೇಶ

ನಕಲಿ ಗೋರಕ್ಷಕರನ್ನು ಪತ್ತೆ ಮಾಡಲು ಹರ್ಯಾಣ ಸರ್ಕಾರದ ಹೊಸ ಯೋಜನೆ

ಹರ್ಯಾಣ ಸರ್ಕಾರ ನಕಲಿ ಗೋರಕ್ಷಕರನ್ನು ಪತ್ತೆ ಮಾಡಲು ಹೊಸ ಯೋಜನೆಯೊಂದನ್ನು ರೂಪಿಸಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಕಲಿ ಗೋರಕ್ಷಕರ ಬಗ್ಗೆ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ಹರ್ಯಾಣ ಸರ್ಕಾರ ನಕಲಿ ಗೋರಕ್ಷಕರನ್ನು ಪತ್ತೆ ಮಾಡಲು ಹೊಸ ಯೋಜನೆಯೊಂದನ್ನು ರೂಪಿಸಿದೆ.
ಗೋವುಗಳನ್ನು ರಕ್ಷಿಸುವ ಅಸಲಿ ಗೋರಕ್ಷಕರನ್ನು ಗುರುತಿಸಲು ಹರ್ಯಾಣ ಗೋ ಆಯೋಗದಿಂದ ಗುರುತಿನ ಚೀಟಿ ನೀಡುವುದು ಹರ್ಯಾಣ ಸರ್ಕಾರದ ಹೊಸ ಯೋಜನೆಯಾಗಿದೆ. ಕೆಲವು ಕ್ರಿಮಿನಲ್ ಗಳು ಗೋರಕ್ಷಕರ ಸೋಗಿನಲ್ಲಿದ್ದಾರೆ ಇಂತವರನ್ನು ಕಂಡುಹಿಡಿಯಲು ಅಸಲಿ ಗೋರಕ್ಷಕರಿಗೆ ಗುರುತಿನ ಚೀಟಿ ನೀಡಲಾಗುವುದು ಎಂದು ಹರ್ಯಾಣ ಗೋ ಆಯೋಗದ ಮುಖ್ಯಸ್ಥ ಹಾಗೂ ಆರ್ ಎಸ್ ಎಸ್ ನ ಮುಖಂಡ ಬಾನಿ ರಾಮ್ ಮಂಗಲ್ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಗೋರಕ್ಷಕರಲ್ಲಿ ಬಹುತೇಕರು ಸಮಾಜಘಾತುಕ ಶಕ್ತಿಗಳು, ಅಂತಹ ಸ್ವಯಂ ಘೋಷಿತ ಗೋ ರಕ್ಷಕರು ತಮ್ಮ ತಪ್ಪುಗಳನ್ನು ಮುಚ್ಚಿಡಲು ಗೋರಕ್ಷಣೆಯ ಸೋಗು ಹಾಕುತ್ತಾರೆ ಎಂದು ಹೇಳಿದ್ದರು. ಹರ್ಯಾಣ ಪೊಲೀಸರು ನಕಲಿ ಗೋರಕ್ಷಕರ ಜಾಲದ ಮೇಲೆ ದಾಳಿ ನಡೆಸಿತ್ತು. ಈ ವೇಳೆ ನಕಲಿ ಗೋ ರಕ್ಷಕರ ಜಾಲ, ಗೋವು ಅಥವಾ ಇನ್ನಿತರ ಪ್ರಾಣಿಗಳನ್ನು ಸಾಗಿಸುತ್ತಿದ್ದ ವಾಹನಗಳಿಂದ 8,000 ರೂಪಾಯಿಗಳನ್ನು ವಸೂಲಿ ಮಾಡುತ್ತಿದ್ದ ಮಾಹಿತಿ ಬಹಿರಂಗವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ