ನಕಲಿ ಗೋರಕ್ಷಕರನ್ನು ಪತ್ತೆ ಮಾಡಲು ಹರ್ಯಾಣ ಸರ್ಕಾರದ ಹೊಸ ಯೋಜನೆ 
ದೇಶ

ನಕಲಿ ಗೋರಕ್ಷಕರನ್ನು ಪತ್ತೆ ಮಾಡಲು ಹರ್ಯಾಣ ಸರ್ಕಾರದ ಹೊಸ ಯೋಜನೆ

ಹರ್ಯಾಣ ಸರ್ಕಾರ ನಕಲಿ ಗೋರಕ್ಷಕರನ್ನು ಪತ್ತೆ ಮಾಡಲು ಹೊಸ ಯೋಜನೆಯೊಂದನ್ನು ರೂಪಿಸಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಕಲಿ ಗೋರಕ್ಷಕರ ಬಗ್ಗೆ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ಹರ್ಯಾಣ ಸರ್ಕಾರ ನಕಲಿ ಗೋರಕ್ಷಕರನ್ನು ಪತ್ತೆ ಮಾಡಲು ಹೊಸ ಯೋಜನೆಯೊಂದನ್ನು ರೂಪಿಸಿದೆ.
ಗೋವುಗಳನ್ನು ರಕ್ಷಿಸುವ ಅಸಲಿ ಗೋರಕ್ಷಕರನ್ನು ಗುರುತಿಸಲು ಹರ್ಯಾಣ ಗೋ ಆಯೋಗದಿಂದ ಗುರುತಿನ ಚೀಟಿ ನೀಡುವುದು ಹರ್ಯಾಣ ಸರ್ಕಾರದ ಹೊಸ ಯೋಜನೆಯಾಗಿದೆ. ಕೆಲವು ಕ್ರಿಮಿನಲ್ ಗಳು ಗೋರಕ್ಷಕರ ಸೋಗಿನಲ್ಲಿದ್ದಾರೆ ಇಂತವರನ್ನು ಕಂಡುಹಿಡಿಯಲು ಅಸಲಿ ಗೋರಕ್ಷಕರಿಗೆ ಗುರುತಿನ ಚೀಟಿ ನೀಡಲಾಗುವುದು ಎಂದು ಹರ್ಯಾಣ ಗೋ ಆಯೋಗದ ಮುಖ್ಯಸ್ಥ ಹಾಗೂ ಆರ್ ಎಸ್ ಎಸ್ ನ ಮುಖಂಡ ಬಾನಿ ರಾಮ್ ಮಂಗಲ್ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಗೋರಕ್ಷಕರಲ್ಲಿ ಬಹುತೇಕರು ಸಮಾಜಘಾತುಕ ಶಕ್ತಿಗಳು, ಅಂತಹ ಸ್ವಯಂ ಘೋಷಿತ ಗೋ ರಕ್ಷಕರು ತಮ್ಮ ತಪ್ಪುಗಳನ್ನು ಮುಚ್ಚಿಡಲು ಗೋರಕ್ಷಣೆಯ ಸೋಗು ಹಾಕುತ್ತಾರೆ ಎಂದು ಹೇಳಿದ್ದರು. ಹರ್ಯಾಣ ಪೊಲೀಸರು ನಕಲಿ ಗೋರಕ್ಷಕರ ಜಾಲದ ಮೇಲೆ ದಾಳಿ ನಡೆಸಿತ್ತು. ಈ ವೇಳೆ ನಕಲಿ ಗೋ ರಕ್ಷಕರ ಜಾಲ, ಗೋವು ಅಥವಾ ಇನ್ನಿತರ ಪ್ರಾಣಿಗಳನ್ನು ಸಾಗಿಸುತ್ತಿದ್ದ ವಾಹನಗಳಿಂದ 8,000 ರೂಪಾಯಿಗಳನ್ನು ವಸೂಲಿ ಮಾಡುತ್ತಿದ್ದ ಮಾಹಿತಿ ಬಹಿರಂಗವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT