ರಾಜ್ಯಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ 
ದೇಶ

ರಾಜ್ಯಸಭಾ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಸಂಸತ್ ನ ಮುಂಗಾರು ಅಧಿವೇಶನದ ರಾಜ್ಯಸಭಾ ಕಲಾಪವನ್ನು ರಾಜ್ಯಸಭೆಯ ಅಧ್ಯಕ್ಷ ಎಂ ಹಮೀದ್ ಅನ್ಸಾರಿ ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ.

ನವದೆಹಲಿ: ಸಂಸತ್ ನ ಮುಂಗಾರು ಅಧಿವೇಶನದ ರಾಜ್ಯಸಭಾ ಕಲಾಪವನ್ನು ರಾಜ್ಯಸಭೆಯ ಅಧ್ಯಕ್ಷ ಎಂ ಹಮೀದ್ ಅನ್ಸಾರಿ ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ.

ರಾಜ್ಯಸಭೆಯ ಕಲಾಪಗಳನ್ನು ಹೆಚ್ಚು ಫಲಪ್ರದವಾಗಿತ್ತು ಎಂದಿರುವ ಹಮೀದ್ ಅನ್ಸಾರಿ, ಈ ಹಿಂದೆ ರಾಜ್ಯಸಭಾ ಕಲಾಪಗಳಿಗೆ ಉಂಟಾದ ಅಡೆತಡೆಗಳ ಬೆಗ್ಗೆ ಸದಸ್ಯರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ಈ ಅಧಿವೇಶನದ ರಾಜ್ಯಸಭಾ ಕಲಾಪ ಅತಿ ಹೆಚ್ಚು ಫಲಪ್ರದವಾಗಿತ್ತು ಎಂದು ಹಮೀದ್ ಅನ್ಸಾರಿ ತಿಳಿಸಿದ್ದು, ರಾಜ್ಯಸಭೆಯಲ್ಲಿ ನಡೆದ ರಚನಾತ್ಮಕ ಚರ್ಚೆ, ಮಸೂದೆಗಳ ಅಂಗೀಕಾರದಿಂದ ಸಂತಸಗೊಂಡಿದ್ದಾಗಿ ತಿಳಿಸಿದ್ದಾರೆ. ಅಧಿವೇಶನದಲ್ಲಿ 112 ಗಂಟೆಗಳು ರಾಜ್ಯಸಭೆ ಕೆಲಸ ಮಾಡಿದ್ದು, 300 ಪ್ರಮುಖ ಪ್ರಶ್ನೆಗಳನ್ನು ಚರ್ಚಿಸಲಾಗಿದೆ, ಕಲಾಪದ ಶೂನ್ಯ ವೇಳೆಯಲ್ಲಿ ಲ್ಲಿ 120 ಪ್ರಶ್ನೆಗಳು ಎದುರಾಗಿದ್ದು ಈ ಪೈಕಿ 21 ಕ್ಕೆ ಸಚಿವರು ತಕ್ಷಣವೇ ಉತ್ತರಿಸಿದ್ದರೆ, 91 ಕ್ಕೆ ನಂತರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಹಮೀದ್ ಅನ್ಸಾರಿ ತಿಳಿಸಿದ್ದಾರೆ. ಜು.18 ರಿಂದ ಪ್ರಾರಂಭವಾದ ಅಧಿವೇಶನದಲ್ಲಿ  ಜಿಎಸ್ ಟಿ ಸೇರಿದಂತೆ ಕೇಂದ್ರ ಸರ್ಕಾರದ 14 ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದು ಹಮೀದ್ ಅನ್ಸಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT