ಇನ್ಫೋಸಿಸ್ ಸಹ ಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ(ಸಂಗ್ರಹ ಚಿತ್ರ) 
ದೇಶ

ಸ್ಮಾರ್ಟ್ ಸಿಟಿಗಳ ವಿಷಯದಲ್ಲಿ ನಾವು ಬಹಳ ಹಿಂದೆ ಇದ್ದೇವೆ: ನಾರಾಯಣ ಮೂರ್ತಿ

ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮಹಾತ್ವಾಕಾಂಕ್ಷಿ ಕಾರ್ಯಕ್ರಮಗಳಲ್ಲಿ ಒಂದಾದ ಸ್ಮಾರ್ಟ್ ಸಿಟಿ ಅಭಿವೃದ್ಧಿ...

ಮುಂಬೈ: ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮಹಾತ್ವಾಕಾಂಕ್ಷಿ ಕಾರ್ಯಕ್ರಮಗಳಲ್ಲಿ ಒಂದಾದ ಸ್ಮಾರ್ಟ್ ಸಿಟಿ ಅಭಿವೃದ್ಧಿ ಕನಸು ನನಸಾಗುವ ನಿಟ್ಟಿನಲ್ಲಿ ನಮ್ಮ ದೇಶ ಬಹಳ ಹಿಂದಿದೆ ಎಂದು ಇನ್ಫೋಸಿಸ್ ಸಹ ಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಹೇಳಿದ್ದಾರೆ. 
ಮುಂಬೈಯಲ್ಲಿ ಅವರು ತಮ್ಮ ಒಂದು ಗಂಟೆ ಕಾಲದ ನಗರ ವ್ಯವಸ್ಥೆಗಳು ಉಪನ್ಯಾಸದಡಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಏಕೆ ಪ್ರಸ್ತಾಪಿಸಿಲ್ಲ ಎಂದು ಕೇಳಲಾದ ಪ್ರಶ್ನೆಗೆ, ಸ್ಮಾರ್ಟ್ ಸಿಟಿಗಳ ಯೋಜನೆಯಲ್ಲಿ ನಾವು ಬಹಳ ಹಿಂದೆ ಉಳಿದಿರುವುದರಿಂದ ನಾನು ಆ ವಿಷಯದ ಬಗ್ಗೆ ಮಾತನಾಡಲಿಲ್ಲ ಎಂದರು.
ನಾನೊಬ್ಬ ಕೆಲಸಗಾರ, ಕೇವಲ ಮಾತನಾಡುವವನಲ್ಲ ಎಂದು ಹೇಳಿದ ನಾರಾಯಣ ಮೂರ್ತಿ, ಸ್ಮಾರ್ಟ್ ಸಿಟಿ ಎಂದರೆ ಹೇಗಿರಬಹುದು ಎಂದು ತಿಳಿದುಕೊಳ್ಳಲು ನೀವೊಮ್ಮೆ ಕರ್ನಾಟಕದ ಮೈಸೂರಿನಲ್ಲಿರುವ ಇನ್ಫೋಸಿಸ್ ಕ್ಯಾಂಪಸ್ ಗೆ ಭೇಟಿ ನೀಡಿ ಎಂದು ಹೇಳಿದರು.
ಇದಕ್ಕೂ ಮುನ್ನ ಜೆಎಸ್ ಡಬ್ಲ್ಯು ಸಾಹಿತ್ಯ ಲೈವ್ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ನಾರಾಯಣ ಮೂರ್ತಿ, ನಗರಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ತುಂಬಾ ಇದೆ. ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಹೂಡಿಕೆ ಮತ್ತು ಪ್ರತಿಭಾವಂತರ ಸಮಾಗಮವನ್ನು ದೂರ ಮಾಡುತ್ತದೆ. ಮುಂಬೈ ನಗರ ಇಂತಹ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸಾಕಷ್ಟು ನಲುಗಿಹೋಗಿದೆ ಎಂದರು.
10-12 ವರ್ಷಗಳ ಹಿಂದೆ ಮುಂಬೈಯನ್ನು  ಏಷ್ಯಾದ ವಾಣಿಜ್ಯ ಕೇಂದ್ರವನ್ನಾಗಿ ಮಾಡಬೇಕೆಂಬ ಆಶಯವಿತ್ತು. ಆದರೆ ಇಂದು ನಾವು ಆ ಕನಸಿನ ಹತ್ತಿರಕ್ಕೂ ಹೋಗಿಲ್ಲ, ಏಕೆಂದರೆ ಬಂಡವಾಳ ಹೂಡಿಕೆಗಳು ಹರಿದುಬರುತ್ತಿಲ್ಲ. ಪ್ರತಿಭಾವಂತರು ಸಿಗುತ್ತಿಲ್ಲ. ಉತ್ಪಾದನೆ ಕುಸಿತಗೊಂಡು ಬೆಳವಣಿಗೆ ಕುಂಠಿತಗೊಂಡಿದೆ. ಕ್ಯಾನ್ಯರ್ ತೀವ್ರವಾಗಿ ಹಬ್ಬಿರುವಾಗ ನಾವಿನ್ನೂ ಚಿಕಿತ್ಸಾ ಪೆಟ್ಟಿಗೆಯನ್ನೇ ಹಿಡಿದುಕೊಂಡು ಓಡಾಡುತ್ತಿದ್ದೇವೆ ಎಂದರು.
ನಮ್ಮ ದೇಶದ ನಗರಗಳನ್ನು ಅಭಿವೃದ್ಧಿ ಹೊಂದಿದ ದೇಶಗಳ ಜೊತೆ ಹೋಲಿಕೆ ಮಾಡಬಾರದು. ಆದರೆ ಮಾರುಕಟ್ಟೆ ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳಾದ ಬ್ರೆಜಿಲ್, ಇಂಡೋನೇಷಿಯಾ, ಮಲೇಶಿಯಾ ಮೊದಲಾದ ದೇಶಗಳ ನಗರಗಳನ್ನು ಅಭಿವೃದ್ಧಿಪಡಿಸಲು ತುಂಬಾ ಪ್ರಯತ್ನಪಡುತ್ತಿವೆ. ಅವುಗಳನ್ನು ಅನುಸರಿಸಬೇಕು ಎಂದು ನಾರಾಯಣ ಮೂರ್ತಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT