ಇನ್ಫೋಸಿಸ್ ಸಹ ಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ(ಸಂಗ್ರಹ ಚಿತ್ರ) 
ದೇಶ

ಸ್ಮಾರ್ಟ್ ಸಿಟಿಗಳ ವಿಷಯದಲ್ಲಿ ನಾವು ಬಹಳ ಹಿಂದೆ ಇದ್ದೇವೆ: ನಾರಾಯಣ ಮೂರ್ತಿ

ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮಹಾತ್ವಾಕಾಂಕ್ಷಿ ಕಾರ್ಯಕ್ರಮಗಳಲ್ಲಿ ಒಂದಾದ ಸ್ಮಾರ್ಟ್ ಸಿಟಿ ಅಭಿವೃದ್ಧಿ...

ಮುಂಬೈ: ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮಹಾತ್ವಾಕಾಂಕ್ಷಿ ಕಾರ್ಯಕ್ರಮಗಳಲ್ಲಿ ಒಂದಾದ ಸ್ಮಾರ್ಟ್ ಸಿಟಿ ಅಭಿವೃದ್ಧಿ ಕನಸು ನನಸಾಗುವ ನಿಟ್ಟಿನಲ್ಲಿ ನಮ್ಮ ದೇಶ ಬಹಳ ಹಿಂದಿದೆ ಎಂದು ಇನ್ಫೋಸಿಸ್ ಸಹ ಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಹೇಳಿದ್ದಾರೆ. 
ಮುಂಬೈಯಲ್ಲಿ ಅವರು ತಮ್ಮ ಒಂದು ಗಂಟೆ ಕಾಲದ ನಗರ ವ್ಯವಸ್ಥೆಗಳು ಉಪನ್ಯಾಸದಡಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಏಕೆ ಪ್ರಸ್ತಾಪಿಸಿಲ್ಲ ಎಂದು ಕೇಳಲಾದ ಪ್ರಶ್ನೆಗೆ, ಸ್ಮಾರ್ಟ್ ಸಿಟಿಗಳ ಯೋಜನೆಯಲ್ಲಿ ನಾವು ಬಹಳ ಹಿಂದೆ ಉಳಿದಿರುವುದರಿಂದ ನಾನು ಆ ವಿಷಯದ ಬಗ್ಗೆ ಮಾತನಾಡಲಿಲ್ಲ ಎಂದರು.
ನಾನೊಬ್ಬ ಕೆಲಸಗಾರ, ಕೇವಲ ಮಾತನಾಡುವವನಲ್ಲ ಎಂದು ಹೇಳಿದ ನಾರಾಯಣ ಮೂರ್ತಿ, ಸ್ಮಾರ್ಟ್ ಸಿಟಿ ಎಂದರೆ ಹೇಗಿರಬಹುದು ಎಂದು ತಿಳಿದುಕೊಳ್ಳಲು ನೀವೊಮ್ಮೆ ಕರ್ನಾಟಕದ ಮೈಸೂರಿನಲ್ಲಿರುವ ಇನ್ಫೋಸಿಸ್ ಕ್ಯಾಂಪಸ್ ಗೆ ಭೇಟಿ ನೀಡಿ ಎಂದು ಹೇಳಿದರು.
ಇದಕ್ಕೂ ಮುನ್ನ ಜೆಎಸ್ ಡಬ್ಲ್ಯು ಸಾಹಿತ್ಯ ಲೈವ್ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ನಾರಾಯಣ ಮೂರ್ತಿ, ನಗರಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ತುಂಬಾ ಇದೆ. ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಹೂಡಿಕೆ ಮತ್ತು ಪ್ರತಿಭಾವಂತರ ಸಮಾಗಮವನ್ನು ದೂರ ಮಾಡುತ್ತದೆ. ಮುಂಬೈ ನಗರ ಇಂತಹ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸಾಕಷ್ಟು ನಲುಗಿಹೋಗಿದೆ ಎಂದರು.
10-12 ವರ್ಷಗಳ ಹಿಂದೆ ಮುಂಬೈಯನ್ನು  ಏಷ್ಯಾದ ವಾಣಿಜ್ಯ ಕೇಂದ್ರವನ್ನಾಗಿ ಮಾಡಬೇಕೆಂಬ ಆಶಯವಿತ್ತು. ಆದರೆ ಇಂದು ನಾವು ಆ ಕನಸಿನ ಹತ್ತಿರಕ್ಕೂ ಹೋಗಿಲ್ಲ, ಏಕೆಂದರೆ ಬಂಡವಾಳ ಹೂಡಿಕೆಗಳು ಹರಿದುಬರುತ್ತಿಲ್ಲ. ಪ್ರತಿಭಾವಂತರು ಸಿಗುತ್ತಿಲ್ಲ. ಉತ್ಪಾದನೆ ಕುಸಿತಗೊಂಡು ಬೆಳವಣಿಗೆ ಕುಂಠಿತಗೊಂಡಿದೆ. ಕ್ಯಾನ್ಯರ್ ತೀವ್ರವಾಗಿ ಹಬ್ಬಿರುವಾಗ ನಾವಿನ್ನೂ ಚಿಕಿತ್ಸಾ ಪೆಟ್ಟಿಗೆಯನ್ನೇ ಹಿಡಿದುಕೊಂಡು ಓಡಾಡುತ್ತಿದ್ದೇವೆ ಎಂದರು.
ನಮ್ಮ ದೇಶದ ನಗರಗಳನ್ನು ಅಭಿವೃದ್ಧಿ ಹೊಂದಿದ ದೇಶಗಳ ಜೊತೆ ಹೋಲಿಕೆ ಮಾಡಬಾರದು. ಆದರೆ ಮಾರುಕಟ್ಟೆ ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳಾದ ಬ್ರೆಜಿಲ್, ಇಂಡೋನೇಷಿಯಾ, ಮಲೇಶಿಯಾ ಮೊದಲಾದ ದೇಶಗಳ ನಗರಗಳನ್ನು ಅಭಿವೃದ್ಧಿಪಡಿಸಲು ತುಂಬಾ ಪ್ರಯತ್ನಪಡುತ್ತಿವೆ. ಅವುಗಳನ್ನು ಅನುಸರಿಸಬೇಕು ಎಂದು ನಾರಾಯಣ ಮೂರ್ತಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT