ಸಾಂದರ್ಭಿಕ ಚಿತ್ರ 
ದೇಶ

ಬುಲಂದಶಹರ್ ಗ್ಯಾಂಗ್ ರೇಪ್: ಅಜಂ ಖಾನ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಸುಪ್ರೀಂ ಮೆಟ್ಟಿಲೇರಿದ ಅಪ್ರಾಪ್ತ ಸಂತ್ರಸ್ತೆ

ಬುಲಂದ್ ಶಹರ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪ್ರಾಪ್ತ ಸಂತ್ರಸ್ತೆ, ಉತ್ತರ ಪ್ರದೇಶ ಸಚಿವ ಅಜಂ ಖಾನ್ ವಿರುದ್ಧ ಎಫ್ ಐ ಆರ್ ...

ನವದೆಹಲಿ: ಬುಲಂದ್ ಶಹರ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪ್ರಾಪ್ತ ಸಂತ್ರಸ್ತೆ, ಉತ್ತರ ಪ್ರದೇಶ  ಸಚಿವ ಅಜಂ ಖಾನ್ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾಳೆ.

ಬುಲಂದಶಹರ್ ಘಟನೆ ವಿರೋಧ ಪಕ್ಷಗಳ ‘ರಾಜಕೀಯ ಪಿತೂರಿ’ಎಂದು ಹೇಳುವ ಮೂಲಕ ಖಾನ್ ಭಾರಿ ವಿವಾದವನ್ನು ಹುಟ್ಟು ಹಾಕಿದ್ದರು.
ಈ ಸಂಬಂಧ ಸುಪ್ರೀಂಕೋರ್ಟಿನಲ್ಲಿ ಮನವಿ ಸಲ್ಲಿಸಿರುವ ಆಕೆ ಪ್ರಕರಣವನ್ನು ದೆಹಲಿಗೆ ವರ್ಗಾಯಿಸಬೇಕು ಮತ್ತು ನ್ಯಾಯಾಲಯದ ನಿಗಾದಲ್ಲಿ ತನಿಖೆ ನಡೆಯಬೇಕು, ತನಗೆ ಶಾಲೆಗೆ ಹೋಗಲು ವ್ಯವಸ್ಥೆಯಾಗಬೇಕು ಮತ್ತು ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆಲ್ಲರಿಗೂ ಮರುವಸತಿ ಕಲ್ಪಿಸಬೇಕು ಎಂದು ಕೋರಿದ್ದಾಳೆ.

ಬುಲಂದ ಶಹರ್​ನಲ್ಲಿ ಸುಮಾರು 15ಕ್ಕೂ ಹೆಚ್ಚು ಮಂದಿ ದರೋಡೆಕೋರರು ಇಡೀ ಕುಟುಂಬದ ಸದಸ್ಯರನ್ನು ವಾಹನದಲ್ಲಿ ಹೋಗುತ್ತಿದ್ದಾಗ ತಡೆದು ಹೊಲವೊಂದಕ್ಕೆ ಹೋಗುವಂತೆ ಮಾಡಿ ಕುಟುಂಬ ಸದಸ್ಯರ ಕಣ್ಣೆದುರಲ್ಲೇ ತಾಯಿ ಮತ್ತು ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಅವರ ಬಳಿ ಇದ್ದ ಚಿನ್ನಾಭರಣ, ನಗದು ಹಣವೆಲ್ಲವನ್ನೂ ದೋಚಿದ್ದರು.

ಅಲಹಾಬಾದ್ ಹೈಕೋರ್ಟ್ ಈಗಾಗಲೇ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಸ್ಸಾಂ: ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ; ಸ್ಥಳದಲ್ಲೇ 7 ಆನೆಗಳ ದಾರುಣ ಸಾವು

ಉ.ಕ. ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ

Air India Express ಪೈಲಟ್ ನಿಂದ ಸ್ಪೈಸ್ ಜೆಟ್ ಪ್ರಯಾಣಿಕನ ಮೇಲೆ ಹಲ್ಲೆ; ರಕ್ತಸ್ರಾವದಿಂದ ನರಳಿದ ಸಂತ್ರಸ್ತ

Epstein Files ಬಿಡುಗಡೆ: ಟ್ರಂಪ್ ಬಗ್ಗೆ ಹೆಚ್ಚಿನದ್ದಿಲ್ಲ; ಕ್ಲಿಂಟನ್ ಫೋಟೋಗಳು ಬಹಿರಂಗ!

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಸಿಗದ ನಿರೀಕ್ಷಣಾ ಜಾಮೀನು: ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ ಭೈರತಿ ಬಸವರಾಜು?

SCROLL FOR NEXT