ಭಾರತ ಮತ್ತು ಪಾಕ್ ಪ್ರಧಾನಿಗಳ ಭೇಟಿ (ಸಂಗ್ರಹ ಚಿತ್ರ) 
ದೇಶ

ಕಾಶ್ಮೀರ ಸಮಸ್ಯೆ ಚರ್ಚೆಗೆ ಆಹ್ವಾನ; ಮೊದಲು ಭಯೋತ್ಪಾದನೆ ಕುರಿತು ಚರ್ಚಿಸಿ: ಪಾಕ್ ಗೆ ಭಾರತ

ಕಾಶ್ಮೀರ ಸಮಸ್ಯೆಗೂ ಮೊದಲು ಪಾಕಿಸ್ತಾನ ಭಯೋತ್ಪಾದನೆ ಕುರಿತು ಮಾತನಾಡಲಿ ಎಂದು ಭಾರತ ತಿರುಗೇಟು ನೀಡಿದೆ.

ನವದೆಹಲಿ: ಕಾಶ್ಮೀರ ಹಿಂಸಾಚಾರ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಬೆನ್ನಲ್ಲೇ ಕಾಶ್ಮೀರ ಸಮಸ್ಯೆ ಕುರಿತು ಭಾರತವನ್ನು ಚರ್ಚೆಗೆ ಆಹ್ವಾನಿಸಿದ್ದ ಪಾಕಿಸ್ತಾನಕ್ಕೆ ದಿಟ್ಟ  ಉತ್ತರ ನೀಡಲಾಗಿದ್ದು, ಕಾಶ್ಮೀರ ಸಮಸ್ಯೆಗೂ ಮೊದಲು ಪಾಕಿಸ್ತಾನ ಭಯೋತ್ಪಾದನೆ ಕುರಿತು ಮಾತನಾಡಲಿ ಎಂದು ತಿರುಗೇಟು ನೀಡಿದೆ.

ಭಾರತ ಕಾಶ್ಮೀರ ಸಮಸ್ಯೆ ಕುರಿತಂತೆ ಪಾಕಿಸ್ತಾನದೊಂದಿಗೆ ಚರ್ಚೆಗೆ ಸಿದ್ಧವಿದ್ದು, ಅದೂ ಕೂಡ ಗಡಿಯಾಚೆಗಿನ ಭಯೋತ್ಪಾದನೆ, ಮುಂಬೈ ಮತ್ತು ಪಠಾಣ್ ಕೋಟ್ ಉಗ್ರ ದಾಳಿ ಸೇರಿದಂತೆ  ಸಂಬಂಧಪಟ್ಟ ವಿಚಾರಗಳ ಕುರಿತು ಮಾತ್ರ ಚರ್ಚೆ ನಡೆಯಬೇಕು ಎಂದು ದಿಟ್ಟ ಉತ್ತರ ನೀಡಿದೆ. ಈ ಬಗ್ಗೆ ಮಾತನಾಡಿದ ಕೇಂದ್ರ ವಿದೇಶಾಂಗ ಇಲಾಖೆಯ ವಕ್ತಾರ ವಿಕಾಸ್ ಸ್ವರೂಪ್ ಅವರು,  ಪಾಕಿಸ್ತಾನದ ಆಹ್ವಾನವನ್ನು ಭಾರತ ಸ್ವಾಗತಿಸುತ್ತದೆ. ಆದರೆ ಚರ್ಚೆ ವೇಳೆ ಪಾಕಿಸ್ತಾನ ಅನಾವಶ್ಯಕ ವಿಚಾರಗಳನ್ನು ಮಾತನಾಡುವುದನ್ನು ಬಿಟ್ಟು ಕೇವಲ ಕಾಶ್ಮೀರ ವಿಚಾರ ಮತ್ತು ಅದಕ್ಕೆ  ಸಂಬಂಧಿಸಿದ ಭಯೋತ್ಪಾದನೆ ಕುರಿತು ಮಾತ್ರ ಚರ್ಚಿಸಬೇಕು ಎಂದು ಹೇಳಿದ್ದಾರೆ.

ಬಹುದ್ದೂರ್ ಅಲಿಯಂತಹ ಉಗ್ರಗಾಮಿಗಳ ಗಡಿ ನುಸುಳುವಿಕೆ, ಕಾಶ್ನೀರ ಹಿಂಸಾಚಾರಕ್ಕೆ ಸಂಚು, ಗಡಿಯಾಚೆಗಿನ ಭಯೋತ್ಪಾದನೆ, ಹಫೀಜ್ ಸಯ್ಯೀದ್ ರಂತಹ ಉಗ್ರವಾದಿಗಳ ಸಾರ್ವಜನಿಕ  ಪರೇಡ್, ಸಯ್ಯೀದ್ ಸಲಾವುದ್ದೀನ್ ಪ್ರಚೋದನಾತ್ಮಕ ಭಾಷಣ ಸೇರಿದಂತೆ ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಮಾತ್ರ ಚರ್ಚಿಸಬೇಕು ಎಂದು ವಿಕಾಸ್ ಸ್ವರೂಪ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT