ಸಾಂದರ್ಭಿಕ ಚಿತ್ರ 
ದೇಶ

ಮ್ಯಾನ್ ಹೋಲ್ ನಲ್ಲಿ ನಾಲ್ವರ ಶವ ಪತ್ತೆ

ಮ್ಯಾನ್​ಹೋಲ್ ಶುಚಿಗೊಳಿಸಲು ಒಳಗಿಳಿದಾಗ ಉಸಿರಾಟದ ತೊಂದರೆಗೆ ಸಿಲುಕಿದ ಮೂವರು ನೈರ್ಮಲ್ಯ ನೌಕರರು ಮತ್ತು ಅವರನ್ನು ರಕ್ಷಿಸಲೆಂದು ...

ಹೈದರಾಬಾದ್: ಮ್ಯಾನ್​ಹೋಲ್ ಶುಚಿಗೊಳಿಸಲು ಒಳಗಿಳಿದಾಗ ಉಸಿರಾಟದ ತೊಂದರೆಗೆ ಸಿಲುಕಿದ ಮೂವರು ನೈರ್ಮಲ್ಯ ನೌಕರರು ಮತ್ತು ಅವರನ್ನು ರಕ್ಷಿಸಲೆಂದು ಇಳಿದ ಕ್ಯಾಬ್ ಚಾಲಕ ಗಂಗಾಧರ ಸಹಿತ ನಾಲ್ವರು ಉಸಿರು ಕಟ್ಟಿ ಮೃತರಾದ ಘಟನೆ ಹೈದರಾಬಾದ್ ಮಾದಾಪುರ ಪ್ರದೇಶದಲ್ಲಿ ಸಂಭವಿಸಿದೆ.

ಸಿಕಂದರಾಬಾದ್ ತಾರ್ನಾಕಾದವರಾದ ಶ್ರೀನಿವಾಸ, ನಾಗೇಶ, ಸತ್ಯಾನಾರಾಯಣ ಮೃತರಾದ ನೈರ್ಮಲ್ಯ ನೌಕರರು. ಮ್ಯಾನ್​ಹೋಲ್​ನ 25 ಅಡಿ ಒಳಗಿಳಿದ ಕಾರ್ಮಿಕರು ವಿಷಾನಿಲ ಸೇವನೆಯಿಂದ ಉಸಿರಾಟ ಸಮಸ್ಯೆಯಿಂದ ಕೂಗಿಕೊಂಡರು. ಅವರ ಧ್ವನಿ ಕೇಳಿ ಮೇಲಿದ್ದ ಕ್ಯಾಬ್ ಚಾಲಕ ರಕ್ಷಣೆಗೆ ಕೆಳಗಿಳಿದಿದ್ದು ಅವರೊಡನೆಯೇ ಸಾವನ್ನಪ್ಪಿದ ಎಂದು ವರದಿಗಳು ತಿಳಿಸಿವೆ.

ಹಗ್ಗದ ನೆರವಿನೊಂದಿಗೆ ಕೆಳಕ್ಕೆ ಇಳಿದ 108 ಆಂಬುಲೆನ್ಸ್ ಸೇವೆಯ ನೌಕರ ಚಂದು ಕೂಡಾ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಜೂನ್ ತಿಂಗಳಲ್ಲಿ ಇದೇ ಮ್ಯಾನ್ ಹೋಲ್​ಗೆ ಬಿದ್ದು ಪಾದಚಾರಿಯೊಬ್ಬರು ಸಾವನ್ನಪ್ಪಿದ್ದರು.

ಯಾವುದೇ ರಕ್ಷಣೆ ಪರಿಕರ ಬಳಸದೆ ಕೆಳಗಿಳಿದಿರುವುದು ಘಟನೆಗೆ ಕಾರಣ ಎನ್ನಲಾಗಿದೆ.ಉಪ ಗುತ್ತಿಗೆದಾರನ ವಿರುದ್ಧವೂ ಕೇಸ್ ದಾಖಲಿಸಿದ್ದು, ಮೃತರ ಕುಟುಂಬಕ್ಕೆ ತಲಾ 2.5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್

SCROLL FOR NEXT