ಭೋಪಾಲ್: 70ನೇ ಸ್ವಾತಂತ್ರ್ಯೋತ್ಸವ ದಿನದ ಅಂಗವಾಗಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಹಿರಿಯ ಬಾಬುಲಾಲ್ ಗೌರ್ ಅವರು ಕಾಂಗ್ರೆಸ್ ಧ್ವಜ ಹಿಡಿದಿ ಅಚ್ಚರಿ ಮೂಡಿಸಿದ್ದಾರೆ.
ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿಯಾಗಿರುವ ಗೌರ್ ಅವರನ್ನು ಇತ್ತೀಚಿಗಷ್ಟೇ ವಯಸ್ಸಿನ ಕಾರಣದಿಂದ ಮಧ್ಯಪ್ರದೇಶ ಗೃಹ ಸಚಿವ ಸ್ಥಾನದಿಂದ ಕೈಬಿಡಲಾಗಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಆರಿಫ್ ಅಖೀಲ್ ನಿನ್ನೆ ಆಯೋಜಿಸಿದ್ದ ಪೈಗಮ್ ಇ ಮೊಹಬತ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ 'ಕೈ'ಹಿಡಿಯುವ ಸೂಚನೆ ನೀಡಿದ್ದಾರೆ.
ಅಖೀಲ್ ಅವರು ಪ್ರತಿವರ್ಷ ಸ್ವಾತಂತ್ರ್ಯೋತ್ಸವ ದಿನದಂದು ಈ ಕಾರ್ಯಕ್ರಮ ಆಯೋಜಿಸುತ್ತಿದ್ದು, ಇದಕ್ಕೆ ಸ್ವಾತಂತ್ರ್ಯ ಹೋರಾಟಗಾರರನ್ನು, ವಿವಿಧ ಧಾರ್ಮಿಕ ಮುಖಂಡರನ್ನು ಹಾಗೂ ರಾಜಕೀಯ ನಾಯಕರನ್ನು ಆಹ್ವಾನಿಸುತ್ತಾರೆ. ಹಾಗೆಯೇ ಗೌರ್ ಅವರನ್ನು ಸ್ವಾತಂತ್ರ್ಯ ಹೋರಾಟಗಾರರನ್ನಾಗಿ ಆಹ್ವಾನಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ನಾಯಕ ಕಾಂಗ್ರೆಸ್ ಧ್ವಜ ಹಿಡಿದಿರುವ ಫೋಟೋ ಇದೀಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲೂ ತೀವ್ರ ಚರ್ಚೆಗೆ ಕಾರಣವಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos