ಪ್ರಮೋದ್ ಕುಮಾರ್ ಗೆ ಅಂತಿಮ ನಮನ 
ದೇಶ

ಹುತಾತ್ಮರಾಗುವ ಕೆಲವೇ ನಿಮಿಷಗಳ ಮುನ್ನ ರಾಷ್ಟ್ರ ಧ್ವಜ ಹಾರಿಸಿದ್ದ ಕಮಾಂಡಂಟ್ ಪ್ರಮೋದ್ ಅಂತ್ಯಕ್ರಿಯೆ

'ಈ ದಿನ ನಮಗೆ ತುಂಬಾ ಮಹತ್ವದ ದಿನ'. ಇದು ಶ್ರೀನಗರದಲ್ಲಿ ರಾಷ್ಟ್ರ ಧ್ವಜ ಹಾರಿಸಿ ಕೆಲವೇ ನಿಮಿಷಗಳಲ್ಲಿ ಹುತಾತ್ಮರಾದ ಸಿಆರ್​ಪಿಎಫ್...

ನವದೆಹಲಿ: 'ಈ ದಿನ ನಮಗೆ ತುಂಬಾ ಮಹತ್ವದ ದಿನ'. ಇದು ಶ್ರೀನಗರದಲ್ಲಿ ರಾಷ್ಟ್ರ ಧ್ವಜ ಹಾರಿಸಿ ಕೆಲವೇ ನಿಮಿಷಗಳಲ್ಲಿ ಹುತಾತ್ಮರಾದ ಸಿಆರ್​ಪಿಎಫ್ ಕಮಾಂಡಂಟ್ ಪ್ರಮೋದ್ ಕುಮಾರ್ ಅವರ ಕೊನೆಯ ಮಾತು. 
ಸ್ವಾತಂತ್ರ್ಯ ದಿನದಂದು ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಹುತಾತ್ಮರಾದ 44 ವರ್ಷದ ಪ್ರಮೋದ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ತವರೂರಾದ ಜಾರ್ಖಂಡ್​ನ ಜಂತರದಲ್ಲಿ ನೆರವೇರಿತು.
ಮಂಗಳವಾರ ಬೆಳಗ್ಗೆ ಜಂತರಕ್ಕೆ ತಲುಪಿದ ಹುತಾತ್ಮ ಪ್ರಮೋದ್ ಕುಮಾರ್ ಅವರ ಪಾರ್ಥೀವ ಶರೀರವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿತ್ತು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸೋಮವಾರ ಬೆಳಗ್ಗೆ 8.30ಕ್ಕೆ ಧ್ವಜಾರೋಹಣ ಮಾಡಿದ್ದ ಕುಮಾರ್ 8.40ರ ಸುಮಾರಿಗೆ ಭಾಷಣ ಮಾಡಿ, ಭಾರತ 70ನೇ ಸ್ವಾತಂತ್ರ್ಯೋತ್ವವನ್ನು ಆಚರಿಸುತ್ತಿದ್ದು, ರಕ್ಷಣಾ ಪಡೆಗಳ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ. ರಕ್ಷಣಾ ಪಡೆಗಳು ಉಗ್ರರನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುತ್ತಿವೆ ಮತ್ತು ಕಾಶ್ಮೀರ ಹಿಂಸಾಚಾರವನ್ನು ನಿಯಂತ್ರಿಸುವಲ್ಲೂ ಯಶಸ್ವಿಯಾಗಿವೆ ಎಂದು ಹೇಳಿದ್ದರು. ಅವರು ಭಾಷಣ ಮುಗಿಸಿ ಕೆಲವೇ ನಿಮಿಷಗಳಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸುತ್ತಿರುವ ಮಾಹಿತಿ ಬಂದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಆರ್​ಪಿಎಫ್ ಕಮಾಂಡಂಟ್  ಪ್ರಮೋದ್ ಕುಮಾರ್ ಹುತಾತ್ಮನಾಗಿದ್ದು, ಒಂಭತ್ತು ಮಂದಿ ಯೋಧರು ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!