ಗೋವಾ ಉಪ ಸ್ಪೀಕರ್ ವಿಷ್ಣುವಾಘ್ 
ದೇಶ

ಗೋವಾ ಉಪ ಸ್ಪೀಕರ್ ವಿಷ್ಣುವಾಘ್ ಆಸ್ಪತ್ರೆಗೆ ದಾಖಲು

ತೀವ್ರ ಅನಾರೋಗ್ಯದಿಂದಾಗಿ ಗೋವಾ ಉಪ ಸ್ಪೀಕರ್ ವಿಷ್ಣುವಾಘ್ ಅವರನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು...

ಪಣಜಿ: ತೀವ್ರ ಅನಾರೋಗ್ಯದಿಂದಾಗಿ ಗೋವಾ ಉಪ ಸ್ಪೀಕರ್ ವಿಷ್ಣುವಾಘ್ ಅವರನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸ್ವಾಂತತ್ರ್ಯೋತ್ಸವ ದಿನದ ಹಿನ್ನೆಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ನಿನ್ನೆ ಭಾಗಿಯಾಗಿದ್ದ ವಾಘ್ ಅವರು ಕಾರ್ಯಕ್ರಮದಲ್ಲಿಯೇ ಎದೆ ನೋವು ಎಂದು ಹೇಳಿಕೊಂಡಿದ್ದಾರೆ. ಕೂಡಲೇ ಅವರನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

ವಾಘ್ ಅವರು ಅತಿಯಾದ ರಕ್ತದೊತ್ತಡ ಹಾಗೂ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು, ಪ್ರಸ್ತುತ ಅವರ ಸ್ಥಿತಿ ಚಿಂತಾಜನಕವಾಗಿದೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆಂದು ಜಿಎಂಸಿಹೆಚ್ ಮುಖ್ಯಸ್ಥ ಡಾ.ಪ್ರದೀಪ್ ನಾಯಕ್ ಅವರು ಹೇಳಿದ್ದಾರೆ.

ಪ್ರಾಥಮಿಕ ತಪಾಸಣೆ ನಂತರ ವಾಘ್ ಅವರಿಗೆ ಹೃದಯಸ್ತಂಭನವಾಗಿರುವ ಸಾಧ್ಯತೆಗಳಿವೆ ಎಂದು ವೈದ್ಯರು ಹೇಳಿದ್ದರು. ಸುದೀರ್ಘ ಪರೀಕ್ಷೆ ನಡೆಸಿದ ನಂತರ ಹೃದಯದಲ್ಲಿ ರಕ್ತನಾಳ ಬ್ಲಾಕ್ ಆಗಿರುವುದು ಕಂಡು ಬಂದಿಲ್ಲ ಎಂದರು. ಆಸ್ಪತ್ರೆಗೆ ಕರೆತರುತ್ತಿದ್ದಂತೆ ವಾಘ್ ಅವರು ಕುಸಿದು ಬಿದ್ದಿದ್ದರು. ಕೂಡಲೇ ವೈದ್ಯರ ತಂಡ ಅವರನ್ನು ಪರಿಶೀಲನೆ ನಡೆಸಿದ್ದರು ಎಂದು ಅವರು ಹೇಳಿದ್ದಾರೆ.

ಇದೇ ವರ್ಷದ ಮೇ ತಿಂಗಳಿನಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದಕ್ಕೆ ಹಾಜರಾಗಿದ್ದ ವಾಘ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಅಂದು ಪ್ರಾಣಾಪಾಯದಿಂದ ಪಾರಾಗಿ ಚೇತರಿಸಿಕೊಂಡಿದ್ದರು. ಇದೀಗ ಮತ್ತೆ ವಾಘ್ ಅವರು ಅನಾರೋಗ್ಯಕ್ಕೀಡಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT