ಸಾಂದರ್ಭಿಕ ಚಿತ್ರ 
ದೇಶ

ಗ್ರಾಮೀಣ ಸೇವೆ ಮಾಡುವ ವೈದ್ಯ ವಿದ್ಯಾರ್ಥಿಗಳಿಗೆ ಶೇ.30 ರಷ್ಟು ಹೆಚ್ಚುವರಿ ಅಂಕ: ಸುಪ್ರೀಂ ಸಮ್ಮತಿ

ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಪ್ರೋತ್ಸಾಹ ನೀಡಲು ಸ್ನಾತಕೋತ್ತರ ಪದವಿ ಮಾಡುವ ವೈದ್ಯರಿಗೆ ಶೇ. 30 ರಷ್ಟು ಅಂಕಗಳನ್ನು ಹೆಚ್ಚುವರಿಯಾಗಿ

ನವದೆಹಲಿ: ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಪ್ರೋತ್ಸಾಹ ನೀಡಲು ಸ್ನಾತಕೋತ್ತರ ಪದವಿ ಮಾಡುವ ವೈದ್ಯರಿಗೆ ಶೇ. 30 ರಷ್ಟು ಅಂಕಗಳನ್ನು ಹೆಚ್ಚುವರಿಯಾಗಿ ನೀಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವ ಎಂಬಿಬಿಎಸ್ ವೈದ್ಯರಿಗೆ ಪಿಜಿ ಕೋರ್ಸ್ ಗೆ ದಾಖಲಾಗುವಾಗ ಒಟ್ಟಾರೆ ಅಂಕಗಳ ಜೊತೆ ಶೇ. 30 ರಷ್ಟು ಹೆಚ್ಚುವರಿ ಅಂಗ ನೀಡಲು ನ್ಯಾಯಮೂರ್ತಿ ಟಿ.ಎಸ್ ಠಾಕೂರ್ ನೇತೃತ್ವದ ನ್ಯಾಯ ಪೀಠ ಸಮ್ಮತಿಸಿದೆ.

ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಪಿಜಿ ಕೋರ್ಸ್  ಗಳಲ್ಲಿ  ಶೇ.30 ರಷ್ಟು ಹೆಚ್ಚುವರಿ ಅಂಕ ನೀಡಬಾರದು ಎಂದು ಉತ್ತರ ಪ್ರದೇಶ ಸರ್ಕಾರ ರದ್ದುಗೊಳಿಸಿದ್ದ ಆದೇಶವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿತ್ತು. ಅಲಹಾಬಾದ್ ಹೈಕೋರ್ಟ್ ನ ಆದೇಶವನ್ನು ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್, ಮೀಸಲಾತಿ ಅಥವಾ ಯಾವುದೇ ಕಾನೂನುಗಳ ಅಡಿ ಪಿಜಿ ಕೋರ್ಸ್ ಗಳಿಗೆ  ದಾಖಲಾತಿ ನೀಡಲು ಅನುಮತಿ ಇರುವುದಿಲ್ಲ ಎಂದು ಹೇಳಿದೆ.

206-17 ನೇ ಸಾಲಿನಲ್ಲಿ  ಪಿಜಿ ಕೋರ್ಸ್ ಗಳಿಗೆ ದಾಖಲಾತಿ ಬಯಸಿರುವ ವೈದ್ಯ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಲು ಸಮ್ಮತಿಸಿದರೇ  ಅಂತವರಿಗೆ ಈ ನಿಯಮ ಅನ್ವಯವಾಗುತ್ತದೆ ಎಂದು ಹೇಳಿದೆ.

ದೇಶಾದ್ಯಂತ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಅಲ್ಲಿ ಸೇವೆ ಸಲ್ಲಿಸಲು ವೈದ್ಯ ವಿದ್ಯಾರ್ಥಿಗಳು ನಿರಾಕರಿಸುತ್ತಿದ್ದು, ಇದರಿಂದ ಹಳ್ಳಿಗಳ ಜನರಿಗೆ ಸರಿಯಾಗ ವೈದ್ಯಕೀಯ ಸೇವೆ ಸಿಗುತ್ತಿಲ್ಲ. ಈ ಕೊರತೆಯನ್ನು ತಪ್ಪಿಸಲು ಸರ್ಕಾರ ವೈದ್ಯ ವಿದ್ಯಾರ್ಥಿಗಳಿಗೆ ಹಲವು ಸೌಲಭ್ಯ ನೀಡುವ ಕುರಿತು ಚಿಂತನೆ ನಡೆಸುತ್ತಿದೆ. ಜೊತೆಗೆ ಗ್ರಾಮೀಣ ಸೇವೆ ಕಡ್ಡಾಯ ಎಂಬ ಆದೇಶಾಜ್ಞೆ ಹೊರಡಿಸಲು ಸರ್ಕಾರ ಯೋಜನೆ ರೂಪಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT