ಸಾಂದರ್ಭಿಕ ಚಿತ್ರ 
ದೇಶ

ಗ್ರಾಮೀಣ ಸೇವೆ ಮಾಡುವ ವೈದ್ಯ ವಿದ್ಯಾರ್ಥಿಗಳಿಗೆ ಶೇ.30 ರಷ್ಟು ಹೆಚ್ಚುವರಿ ಅಂಕ: ಸುಪ್ರೀಂ ಸಮ್ಮತಿ

ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಪ್ರೋತ್ಸಾಹ ನೀಡಲು ಸ್ನಾತಕೋತ್ತರ ಪದವಿ ಮಾಡುವ ವೈದ್ಯರಿಗೆ ಶೇ. 30 ರಷ್ಟು ಅಂಕಗಳನ್ನು ಹೆಚ್ಚುವರಿಯಾಗಿ

ನವದೆಹಲಿ: ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಪ್ರೋತ್ಸಾಹ ನೀಡಲು ಸ್ನಾತಕೋತ್ತರ ಪದವಿ ಮಾಡುವ ವೈದ್ಯರಿಗೆ ಶೇ. 30 ರಷ್ಟು ಅಂಕಗಳನ್ನು ಹೆಚ್ಚುವರಿಯಾಗಿ ನೀಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವ ಎಂಬಿಬಿಎಸ್ ವೈದ್ಯರಿಗೆ ಪಿಜಿ ಕೋರ್ಸ್ ಗೆ ದಾಖಲಾಗುವಾಗ ಒಟ್ಟಾರೆ ಅಂಕಗಳ ಜೊತೆ ಶೇ. 30 ರಷ್ಟು ಹೆಚ್ಚುವರಿ ಅಂಗ ನೀಡಲು ನ್ಯಾಯಮೂರ್ತಿ ಟಿ.ಎಸ್ ಠಾಕೂರ್ ನೇತೃತ್ವದ ನ್ಯಾಯ ಪೀಠ ಸಮ್ಮತಿಸಿದೆ.

ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಪಿಜಿ ಕೋರ್ಸ್  ಗಳಲ್ಲಿ  ಶೇ.30 ರಷ್ಟು ಹೆಚ್ಚುವರಿ ಅಂಕ ನೀಡಬಾರದು ಎಂದು ಉತ್ತರ ಪ್ರದೇಶ ಸರ್ಕಾರ ರದ್ದುಗೊಳಿಸಿದ್ದ ಆದೇಶವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿತ್ತು. ಅಲಹಾಬಾದ್ ಹೈಕೋರ್ಟ್ ನ ಆದೇಶವನ್ನು ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್, ಮೀಸಲಾತಿ ಅಥವಾ ಯಾವುದೇ ಕಾನೂನುಗಳ ಅಡಿ ಪಿಜಿ ಕೋರ್ಸ್ ಗಳಿಗೆ  ದಾಖಲಾತಿ ನೀಡಲು ಅನುಮತಿ ಇರುವುದಿಲ್ಲ ಎಂದು ಹೇಳಿದೆ.

206-17 ನೇ ಸಾಲಿನಲ್ಲಿ  ಪಿಜಿ ಕೋರ್ಸ್ ಗಳಿಗೆ ದಾಖಲಾತಿ ಬಯಸಿರುವ ವೈದ್ಯ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಲು ಸಮ್ಮತಿಸಿದರೇ  ಅಂತವರಿಗೆ ಈ ನಿಯಮ ಅನ್ವಯವಾಗುತ್ತದೆ ಎಂದು ಹೇಳಿದೆ.

ದೇಶಾದ್ಯಂತ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಅಲ್ಲಿ ಸೇವೆ ಸಲ್ಲಿಸಲು ವೈದ್ಯ ವಿದ್ಯಾರ್ಥಿಗಳು ನಿರಾಕರಿಸುತ್ತಿದ್ದು, ಇದರಿಂದ ಹಳ್ಳಿಗಳ ಜನರಿಗೆ ಸರಿಯಾಗ ವೈದ್ಯಕೀಯ ಸೇವೆ ಸಿಗುತ್ತಿಲ್ಲ. ಈ ಕೊರತೆಯನ್ನು ತಪ್ಪಿಸಲು ಸರ್ಕಾರ ವೈದ್ಯ ವಿದ್ಯಾರ್ಥಿಗಳಿಗೆ ಹಲವು ಸೌಲಭ್ಯ ನೀಡುವ ಕುರಿತು ಚಿಂತನೆ ನಡೆಸುತ್ತಿದೆ. ಜೊತೆಗೆ ಗ್ರಾಮೀಣ ಸೇವೆ ಕಡ್ಡಾಯ ಎಂಬ ಆದೇಶಾಜ್ಞೆ ಹೊರಡಿಸಲು ಸರ್ಕಾರ ಯೋಜನೆ ರೂಪಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT