ಅಭಿಷೇಕ್ ಮನು ಸಿಂಘ್ವಿ 
ದೇಶ

ಪಾಕಿಸ್ತಾನದ ವಿಷಯದಲ್ಲಿ ತಕ್ಷಣದ ಪ್ರತಿಕ್ರಿಯೆಯಿಂದ ದೂರವಿರಿ: ಪ್ರಧಾನಿ ಮೋದಿಗೆ ಕಾಂಗ್ರೆಸ್ ಸಲಹೆ

ಪ್ರಧಾನಿ ನರೇಂದ್ರ ಮೋದಿ ಅವರ ಅಸ್ಥಿರ ವಿದೇಶಾಂಗ ನೀತಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್, ಪಾಕಿಸ್ತಾನದ ವಿಷಯದಲ್ಲಿ ತಕ್ಷಣದ ಪ್ರತಿಕ್ರಿಯೆ ನೀಡುವುದರಿಂದ ದೂರವಿರಬೇಕು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಸ್ಥಿರ ವಿದೇಶಾಂಗ ನೀತಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್, ಪಾಕಿಸ್ತಾನದ ವಿಷಯದಲ್ಲಿ ತಕ್ಷಣದ ಪ್ರತಿಕ್ರಿಯೆ ನೀಡುವುದರಿಂದ ದೂರವಿರಬೇಕು ಎಂದು ಸಲಹೆ ನೀಡಿದೆ.

ಈ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಗಳು ಹವಾಮಾನಕ್ಕಿಂತ ವೇಗವಾಗಿ ಬದಲಾಗುತ್ತದೆ ಎಂದು ವ್ಯಂಗ್ಯವಾಡಿರುವ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ಪಾಕಿಸ್ತಾನದೆಡೆಗೆ ಮೋದಿ ಸರ್ಕಾರದ ವಿದೇಶಾಂಗ ನೀತಿಯನ್ನು ಅರ್ಥಮಾಡಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಒಂದು ದಿನ ಪಾಕಿಸ್ತಾನದ ವಿರುದ್ಧವಾಗಿದ್ದರೆ ಮತ್ತೊಂದು ದಿನ ಲಾಹೋರ್ ಗೆ ಹೋಗುತ್ತಾರೆ. ಒಂದು ದಿನ ಮಾತನಾಡದೆ ಇದ್ದರೆ, ಮತ್ತೊಂದು ದಿನ ಪಾಕಿಸ್ತಾನದೊಂದಿಗೆ ಉನ್ನತ ಮಟ್ಟದ ಸಭೆ ನಡೆಸುತ್ತಾರೆ ಎಂದು ಅಭಿಷೇಕ್ ಮನು ಸಿಂಘ್ವಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದ ವಿಷಯದಲ್ಲಿ ಕೇಂದ್ರ ಸರ್ಕಾರ ತಕ್ಷಣದ ಪ್ರತಿಕ್ರಿಯೆ ನೀಡುವುದನ್ನು ನಿಲ್ಲಿಸಬೇಕು, ಸ್ಥಿರತೆ ಇದ್ದಲ್ಲಿ ಪಾಕಿಸ್ತಾನದ ವಿಷಯದಲ್ಲಿ ಕೇಂದ್ರ ಸರ್ಕಾರದೊಂದಿಗೆ ನಾವಿದ್ದೇವೆ ಎಂದು ಅಭಿಷೇಕ್ ಮನು ಸಿಂಘ್ವಿ  ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT