ಅಮರನಾಥ ದೇವಾಲಯದ ಹಿಮಲಿಂಗ 
ದೇಶ

ಪೂಜೆಯೊಂದಿಗೆ 48 ದಿನಗಳ ವಾರ್ಷಿಕ ಅಮರನಾಥ ಯಾತ್ರೆಗೆ ತೆರೆ

ಜುಲೈ 2ರಂದು ಆರಂಭಗೊಂಡಿದ್ದ 48 ದಿನಗಳ ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಗುರುವಾರ ವಿಶೇಷ ಪೂಜೆಯೊಂದಿಗೆ ಶಾಂತಿಯುತವಾಗಿ...

ಶ್ರೀನಗರ: ಜುಲೈ 2ರಂದು ಆರಂಭಗೊಂಡಿದ್ದ 48 ದಿನಗಳ ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಗುರುವಾರ ವಿಶೇಷ ಪೂಜೆಯೊಂದಿಗೆ ಶಾಂತಿಯುತವಾಗಿ ಅಂತ್ಯಗೊಂಡಿದೆ.
ಶಿವನ ಹಿಮಲಿಂಗಕ್ಕೆ ಸಾಂಪ್ರದಾಯಿಕ ಪೂಜೆ ನೆರವೇರಿಸುವ ಮೂಲಕ ಈ ವರ್ಷದ ಅಮರನಾಥ ಯಾತ್ರೆಯನ್ನು ಮುಕ್ತಾಯಗೊಳಿಸಲಾಗಿದೆ ಎಂದು ಶ್ರೀ ಅಮರನಾಥ್ ದೇವಾಲಯದ ಆಡಳಿತ ಮಂಡಳಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಮರನಾಥ ಗುಹೆ ಉತ್ತರ ಕಾಶ್ಮೀರದಲ್ಲಿರುವ ಅನಂತನಾಗ್‌ ಜಿಲ್ಲೆಯಲ್ಲಿದ್ದು, ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದಿಂದ 140 ಕಿ.ಮೀ. ದೂರದಲ್ಲಿದೆ. ಸಮುದ್ರ ಮಟ್ಟದಿಂದ 13000 ಅಡಿ ಎತ್ತರದಲ್ಲಿದೆ. ಇದು ಭಾರತದ ಅತೀ ದೊಡ್ಡ ಗುಹೆಯಾಗಿದ್ದು 130 ಅಡಿ ವ್ಯಾಸವನ್ನು ಹೊಂದಿದೆ.
ಅಮರನಾಥ ಯಾತ್ರೆಯು ಪ್ರತಿ ವರ್ಷ ಜುಲೈ ಹಾಗೂ ಆಗಸ್ಟ್‌ ತಿಂಗಳಿನಲ್ಲಿ ನಡೆಯುತ್ತದೆ. ಅಮರನಾಥ ಗುಹೆಯನ್ನು ತಲುಪಲು ಚಂದನವಾರಿ ಅಥವಾ ಬಲ್ಟಾಲ್‌ನಿಂದ ಚಾರಣ, ಕುದುರೆ ಅಥವಾ ಹೆಲಿಕಾಪ್ಟರ್‌ನಲ್ಲೇ ಸಾಗಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT