ರಾಮಕೃಷ್ಣಾ ರೆಡ್ಡಿ 
ದೇಶ

ಲಂಚಕ್ಕಾಗಿ ಹಿರಿಯ ಅಧಿಕಾರಿಗಳಿಂದ ಕಿರುಕುಳ: ಗುಂಡು ಹಾರಿಸಿಕೊಂಡು ಎಸ್ ಐ ಆತ್ಮಹತ್ಯೆ

ಹಿರಿಯ ಪೊಲೀಸ್ ಅಧಿಕಾರಿಗಳ ಕಿರುಕುಳ ದಿಂದ ಬೇಸತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ..

ಸಂಗಾರೆಡ್ಡಿ: ಹಿರಿಯ ಪೊಲೀಸ್ ಅಧಿಕಾರಿಗಳ ಕಿರುಕುಳ ದಿಂದ ಬೇಸತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್  ತಮ್ಮದೇ ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ಮೇದಕ್ ಜಿಲ್ಲೆಯ ಕೊಂಡಪಾಕ ಮಂಡಲ್  ನಲ್ಲಿ ಪೊಲೀಸ್ ಅಧಿಕಾರಿ ರಾಮಕೃಷ್ಣ ರೆಡ್ಡಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಮಕೃಷ್ಣಾ ರೆಡ್ಡಿ ಪೊಲೀಸ್ ಇಲಾಖೆಗೆ ಸೇರುವ ಮೊದಲು ಸೇನೆಗೆ ಸೇರಿ ಡಿಎಸ್ ಪಿ ರ್ಯಾಂಕ್ ಅಧಿಕಾರಿಯಾಗಿದ್ದರು. ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಅನುಭವ ಕೂಡ ಇತ್ತು.

ಕೊಂಡಪಾಕ ಮಂಡಲ್​ನ ಕುಕುನುರ್ಪಳ್ಳಿಯಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಹಿರಿಯ ಅಧಿಕಾರಿಗಳ ಕಿರುಕುಳವ ಕಾರಣ ಎಂದು ಹೇಳಲಾಗಿದೆ.

ತಮ್ಮ ಸ್ನೇಹಿತರ ಬಳಿಯೂ ಸಹಿಸಿಕೊಳ್ಳಲಾಗದ ಕಿರುಕುಳ ಅನುಭವಿಸುತ್ತಿರುವುದಾಗಿ ಹೇಳಿಕೊಂಡಿದ್ದರು ಎನ್ನಲಾಗಿದೆ.  ಪೊಲೀಸ್ ಕ್ವಾರ್ಟಸ್ ನಲ್ಲಿ ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸಿಸುತ್ತಿದ್ದ ರಾಮಕೃಷ್ಣ ರೆಡ್ಡಿ ಎರಡು ದಿನಗಳ ಹಿಂದೆ  ತಮ್ಮ ಪತ್ನಿಯನ್ನು ಆಕೆ ತವರು ಮನೆಗೆ ಕಳುಹಿಸಿದ್ದರು.

ಬುಧವಾರ ರಾತ್ರಿ 1.30 ಕ್ಕೆ ಕೆಲಸ ಮುಗಿಸಿ ಕ್ವಾರ್ಟಸ್ ಗೆ ಬಂದ ರಾಮಕೃಷ್ಣಾ ರೆಡ್ಡಿ ತಮ್ಮ ಪತ್ನಿ ಹಾಗೂ ಇಬ್ಬರು ಕಾನ್ ಸ್ಟೇಬಲ್ ಗಳಿಗೆ ಫೋನ್ ಮಾಡಿ ಡಿಎಸ್ ಪಿ ಹಾಗೂ ಸರ್ಕಲ್ ಇನ್ಸ್ ಪೆಕ್ಟರ್ ಕಿರುಕುಳ ತಾಳಲಾಗುತ್ತಿಲ್ಲ, ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ವಿಷಯ ಕೇಳಿ ಅವರೆಲ್ಲರೂ ಪೊಲೀಸ್ ಕ್ವಾರ್ಟಸ್ ಗೆ ಬರುವಷ್ಟರಲ್ಲಿ ಸಮಯ ಮೀರಿತ್ತು. ಗುಂಡು ಹಾರಿಸಿಕೊಂಡಿದ್ದರು ಎಂದು ವರದಿಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಅಷ್ಟರಲ್ಲಾಗಲೇ ರಾಮಕೃಷ್ಣ ಕೊನೆಯುಸಿರೆಳೆದಿದ್ದರು ಎಂದು ವರದಿಯಾಗಿದೆ.

ಕಿರುಕುಳ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಡಿಎಸ್​ಪಿ ಮತ್ತು ಸರ್ಕಲ್ ಇನ್ಸ್​ಪೆಕ್ಟರ್ ಅವರ ಹೆಸರು ಡೆತ್ ನೋಟ್​ನಲ್ಲಿದೆ ಎಂದು ಹೇಳಲಾಗಿದೆ.ಈ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT