ಅಮಿತ್ ಶಾ 
ದೇಶ

ಅಭಿವ್ಯಕ್ತಿ ಸ್ವಾತಂತ್ರ್ಯ ದೇಶ ವಿರೋಧಿಯಾಗಿರಬಾರದು: ಅಮಿತ್ ಶಾ

2014 ರ ಲೋಕಸಭಾ ಚುನಾವಣೆಗೂ ಮುನ್ನ ದೇಶವನ್ನು ನೋಡುವ ದೃಷ್ಟಿ ಬೇರೆಯಾಗಿತ್ತು, ಈಗ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಜಗತ್ತು ಭಾರತವನ್ನು ನೋಡುವ ದೃಷ್ಟಿಯೇ ಬದಲಾಗಿದೆ

ಮಂಗಳೂರು: 2014 ರ ಲೋಕಸಭಾ ಚುನಾವಣೆಗೂ ಮುನ್ನ ದೇಶವನ್ನು ನೋಡುವ ದೃಷ್ಟಿ ಬೇರೆಯಾಗಿತ್ತು, ಈಗ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಜಗತ್ತು ಭಾರತವನ್ನು ನೋಡುವ ದೃಷ್ಟಿಯೇ ಬದಲಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಮಂಗಳೂರಿನಲ್ಲಿ ತಿರಂಗಾ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿರುವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಸೇನೆ ಬಲಿಷ್ಠಗೊಳ್ಳುತ್ತಿದೆ. ಗಡಿ ಪ್ರದೇಶದಲ್ಲಿ ಉಗ್ರರ ದಾಳಿಗೆ ಪ್ರತಿ ದಾಳಿ ನಡೆಸಲು ದೆಹಲಿಯಿಂದ ಆದೇಶಕ್ಕಾಗಿ ಕಾಯದೇ, ಬಂದೂಕಿನಿಂದ ಉತ್ತರ ನೀಡಲಾಗುತ್ತಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ದೇಶವಿರೋಧಿ ಘೋಷಣೆಗಳ ಬಗ್ಗೆಯೂ ಮಾತನಾಡಿರುವ ಅಮಿತ್ ಶಾ, ದೇಶದ ಕೆಲವೆಡೆ ದೇಶವಿರೋಧಿ ಘಟನೆಗಳು ನಡೆಯುತ್ತಿದೆ, ಕೆಲವರು ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ, ದೇಶ ಪ್ರೇಮವನ್ನು ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದೇಶದ ವಿರುದ್ಧ ಮಾತನಾಡಲು ಉಪಯೋಗಿಸಬಾರದು ಎಂದು ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ. ದೇಶಪ್ರೇಮವನ್ನು ಪ್ರಶ್ನಿಸುತ್ತಿರುವವರು ದೇಶದ ಇತಿಹಾಸವನ್ನು ಅರಿಯಲಿ, ರಾಷ್ಟ್ರವಾದದ ಕಲ್ಪನೆ ದೇಶವನ್ನು ಒಗ್ಗೂಡಿಸುವ ಲಕ್ಷಣ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದೇಶದ ವಿರುದ್ಧ ಉಪಯೋಗಿಸಬಾರದು ಎಂದು ಅಮಿತ್ ಶಾ ಹೇಳಿದ್ದಾರೆ. ಇನ್ನು ಅಮಿತ್ ಶಾ ಭೇಟಿಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT