ಸಂಗ್ರಹ ಚಿತ್ರ 
ದೇಶ

ಕುಪ್ವಾರದಲ್ಲಿ ಮತ್ತೆ ಉಗ್ರರ ದಾಳಿ: ಕಾರ್ಯಾಚರಣೆಗಿಳಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಮತ್ತೆ ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಕಾಳಗ ಆರಂಭವಾಗಿದ್ದು, ತಂಗ್ಧಾರ್ ನಲ್ಲಿ 4 ಉಗ್ರರು ಅಡಗಿ ಕುಳಿತು ದಾಳಿ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಮತ್ತೆ ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಕಾಳಗ ಆರಂಭವಾಗಿದ್ದು, ತಂಗ್ಧಾರ್ ನಲ್ಲಿ 4 ಉಗ್ರರು ಅಡಗಿ ಕುಳಿತು ದಾಳಿ ನಡೆಸುತ್ತಿರುವುದಾಗಿ ಶನಿವಾರ ತಿಳಿದುಬಂದಿದೆ.

ಉಗ್ರರನ್ನು ಸದೆಬಡಿಯಲು ಭಾರತೀಯ ಸೇನೆ 4 ಪ್ಯಾರಾ ಕಮಾಂಡೋಗಳು ಕಾರ್ಯಾಚರಣೆ ನಡೆಸುತ್ತಿವೆ. ಉಗ್ರರು ಅಡಗಿ ಕುಳಿತಿರುವ ಪ್ರದೇಶದ ಸುತ್ತಲೂ ಈಗಾಗಲೇ ಯೋಧರು ಸುತ್ತವರೆದಿದ್ದು, ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆಯುತ್ತಿದೆ.

ದಾಳಿಯಲ್ಲಿ ಗಾಯಗೊಂಡಿರುವ ಹಾಗೂ ಸಾವಿನ ಕುರಿತಂತೆ ಯಾವುದೇ ವರದಿಗಳಾಗಿಲ್ಲ. ಭಾರತೀಯ ಸೇನೆ ಕಾರ್ಯಾಚರಣೆಯನ್ನು ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕೆಲ ದಿನಗಳ ಹಿಂದಷ್ಟೇ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಸಮೀಪವಿರುವ ನೌಗಮ್ ವಲಯದಲ್ಲಿ ಉಗ್ರರು ಭಾರತದ ಒಳನುಸುಳಲು ಯತ್ನಿಸಿದ್ದರು. ಈ ವೇಳೆ ಕಾರ್ಯಾಚರಣೆ ನಡೆಸಿದ್ದ ಯೋಧರು ನಾಲ್ಕು ಮಂದಿ ಉಗ್ರನ್ನು ಹತ್ಯೆ ಮಾಡಿ ಓರ್ವ ಉಗ್ರನನ್ನು ಸೆರೆ ಹಿಡಿದಿದ್ದರು. ಇದೀಗ ಮತ್ತೆ ಮೂರು-ನಾಲ್ಕು ಉಗ್ರರು ಒಳನುಸುಳಲು ಯತ್ನಿಸಿದ್ದು, ಅಡಗಿ ಕುಳಿತಿರುವ ಉಗ್ರರಿಗಾಗಿ ಯೋಧರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT