ಕರಾವಳಿ ರಕ್ಷಣಾ ಪಡೆ 
ದೇಶ

ಮುಂಬೈನಲ್ಲಿ ದೋಣಿ ಮುಳುಗಡೆ: 15 ಮೀನುಗಾರರ ರಕ್ಷಿಸಿದ ಕರಾವಳಿ ರಕ್ಷಣಾ ಪಡೆ

ಮುಂಬೈ ಕರಾವಳಿ ತೀರದಿಂದ 70 ನಾಟಿಕಲ್ ಮೈಲು ದೂರದಲ್ಲಿ ಮುಳುಗುತ್ತಿದ್ದ ಎರಡು ದೋಣಿಗಳಲ್ಲಿದ್ದ 15 ಮಂದಿ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ...

ಮುಂಬೈ: ಮುಂಬೈ ಕರಾವಳಿ ತೀರದಿಂದ 70 ನಾಟಿಕಲ್ ಮೈಲು ದೂರದಲ್ಲಿ ಮುಳುಗುತ್ತಿದ್ದ ಎರಡು ದೋಣಿಗಳಲ್ಲಿದ್ದ 15 ಮಂದಿ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ಕಾಪಾಡಿದ್ದಾರೆ.

ಕಳೆದ ರಾತ್ರಿ ಹಿಮಸಾಗರ್ ಮತ್ತು ಕೃಷ್ಣಸಾಗರ ದೋಣಿಗಳಲ್ಲಿದ್ದ 15 ಮಂದಿ ಮೀನುಗಾರರನ್ನು ಕಾರ್ಯಾಚರಣೆ ಮೂಲಕ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಸೇನಾ ವಕ್ತಾರರು ಹೇಳಿದ್ದಾರೆ.

ಭಾರತೀಯ ನೌಕಾದಳದ ಹಡಗು ಗಂಗಾ ಮತ್ತು ಭಾರತೀಯ ಕರಾವಳಿ ರಕ್ಷಣಾ ಪಡೆ ಹಡಗು ಅಗ್ರಿಮ್ ಜತೆ ಎ ಸೀ ಕಿಂಗ್ 42ಬಿ ಹೆಲಿಕಾಫ್ಟರ್ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು ಎಲ್ಲಾ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿದೆ.

ನಿನ್ನೆ ಸಂಜೆ ಹಿಮಸಾಗರ್ ಮತ್ತು ಕೃಷ್ಣಸಾಗರ್ ದೋಣಿಯಲ್ಲಿ 15 ಮಂದಿ ಮೀನುಗಾರರು ಮೀನು ಹಿಡಿಯಲು ತೆರಳಿದ್ದು ರಾತ್ರಿಯಾದರೂ ಬಾರದೆ ಇದ್ದಿದ್ದರಿಂದ ಮೀನುಗಾರರನೊಬ್ಬ ಕರಾವಳಿ ರಕ್ಷಣಾ ಪಡೆಗೆ ವಿಷಯ ಮುಟ್ಟಿಸಿದ ನಂತರ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT