ಕರಾವಳಿ ರಕ್ಷಣಾ ಪಡೆ 
ದೇಶ

ಮುಂಬೈನಲ್ಲಿ ದೋಣಿ ಮುಳುಗಡೆ: 15 ಮೀನುಗಾರರ ರಕ್ಷಿಸಿದ ಕರಾವಳಿ ರಕ್ಷಣಾ ಪಡೆ

ಮುಂಬೈ ಕರಾವಳಿ ತೀರದಿಂದ 70 ನಾಟಿಕಲ್ ಮೈಲು ದೂರದಲ್ಲಿ ಮುಳುಗುತ್ತಿದ್ದ ಎರಡು ದೋಣಿಗಳಲ್ಲಿದ್ದ 15 ಮಂದಿ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ...

ಮುಂಬೈ: ಮುಂಬೈ ಕರಾವಳಿ ತೀರದಿಂದ 70 ನಾಟಿಕಲ್ ಮೈಲು ದೂರದಲ್ಲಿ ಮುಳುಗುತ್ತಿದ್ದ ಎರಡು ದೋಣಿಗಳಲ್ಲಿದ್ದ 15 ಮಂದಿ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ಕಾಪಾಡಿದ್ದಾರೆ.

ಕಳೆದ ರಾತ್ರಿ ಹಿಮಸಾಗರ್ ಮತ್ತು ಕೃಷ್ಣಸಾಗರ ದೋಣಿಗಳಲ್ಲಿದ್ದ 15 ಮಂದಿ ಮೀನುಗಾರರನ್ನು ಕಾರ್ಯಾಚರಣೆ ಮೂಲಕ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಸೇನಾ ವಕ್ತಾರರು ಹೇಳಿದ್ದಾರೆ.

ಭಾರತೀಯ ನೌಕಾದಳದ ಹಡಗು ಗಂಗಾ ಮತ್ತು ಭಾರತೀಯ ಕರಾವಳಿ ರಕ್ಷಣಾ ಪಡೆ ಹಡಗು ಅಗ್ರಿಮ್ ಜತೆ ಎ ಸೀ ಕಿಂಗ್ 42ಬಿ ಹೆಲಿಕಾಫ್ಟರ್ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು ಎಲ್ಲಾ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿದೆ.

ನಿನ್ನೆ ಸಂಜೆ ಹಿಮಸಾಗರ್ ಮತ್ತು ಕೃಷ್ಣಸಾಗರ್ ದೋಣಿಯಲ್ಲಿ 15 ಮಂದಿ ಮೀನುಗಾರರು ಮೀನು ಹಿಡಿಯಲು ತೆರಳಿದ್ದು ರಾತ್ರಿಯಾದರೂ ಬಾರದೆ ಇದ್ದಿದ್ದರಿಂದ ಮೀನುಗಾರರನೊಬ್ಬ ಕರಾವಳಿ ರಕ್ಷಣಾ ಪಡೆಗೆ ವಿಷಯ ಮುಟ್ಟಿಸಿದ ನಂತರ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ರಾಹುಲ್ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ!

SCROLL FOR NEXT