ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕ್ಕಂ 
ದೇಶ

ದಾವೂದ್ ಪ್ರಕರಣ: ವಿಶ್ವಸಂಸ್ಥೆಯಲ್ಲಿ ದನೆಯೆತ್ತಲು ಭಾರತಕ್ಕಿದು ಸಕಾಲ- ಉಜ್ವಲ್ ನಿಕ್ಕಂ

ದಾವೂದ್ ಪ್ರಕರಣದಲ್ಲಿ ಪಾಕಿಸ್ತಾನದ ವಿರುದ್ಧ ವಿಶ್ವಸಂಸ್ಥೆಯಲ್ಲಿ ದನಿಯೆತ್ತಲು ಭಾರತಕ್ಕಿದು ಸರಿಯಾದ ಸಮಯ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕ್ಕಂ...

ನವದೆಹಲಿ: ದಾವೂದ್ ಪ್ರಕರಣದಲ್ಲಿ ಪಾಕಿಸ್ತಾನದ ವಿರುದ್ಧ ವಿಶ್ವಸಂಸ್ಥೆಯಲ್ಲಿ ದನಿಯೆತ್ತಲು ಭಾರತಕ್ಕಿದು ಸರಿಯಾದ ಸಮಯ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕ್ಕಂ ಅವರು ಮಂಗಳವಾರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ದಾವೂದ್ ಇಬ್ರಾಹಿಂನ ಪಾಕಿಸ್ತಾನದ ವಿಳಾಸಗಳಿಗೆ ಸಂಬಂಧಿಸಿದಂತೆ ಭಾರತ ಸಲ್ಲಿಸಿದ್ದ 9 ದಾಖಲೆಗಳ ಪೈಕಿ 6 ದಾಖಲೆಗಳು ಸರಿಯಾಗಿದೆ ಎಂದು ಸ್ವತಃ ವಿಶ್ವಸಂಸ್ಥೆಯೇ ಹೇಳಿದೆ. ಈ ಹಿನ್ನೆಲೆಯಲ್ಲಿ ದಾವೂದ್ ಪ್ರಕರಣ ಸಂಬಂಧ ವಿಶ್ವಸಂಸ್ಥೆಯಲ್ಲಿ ಭಾರತ ದನಿಯೆತ್ತಲು ಇದು ಸಕಾಲವಾಗಿದೆ ಎಂದು ಹೇಳಿದ್ದಾರೆ.

ದಾವೂದ್ ಪಾಕಿಸ್ತಾನದಲ್ಲೇ ಅಡಗಿ ಕುಳಿತಿದ್ದಾನೆಂದು ಭಾರತ ಸ್ಫಷ್ಟವಾಗಿ ಹೇಳಿತ್ತು. ಇದೀಗ ವಿಶ್ವಸಂಸ್ಥೆಯೇ 9 ದಾಖಲೆಗಳ ಪೈಕಿ 6 ದಾಖಲೆಗಳು ಸರಿಯಿದೆ ಎಂದು ಹೇಳಿದೆ. ದಾವೂದ್ ನನ್ನು ಪಾಕಿಸ್ತಾನ ಗಡಿಪಾರು ಮಾಡದಿದ್ದರೆ ಅಥವಾ ಭಾರತದ ವಶಕ್ಕೆ ನೀಡದಿದ್ದರೆ, ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ದನಿಯೆತ್ತಬೇಕಾಗುತ್ತದೆ.

ಭಾರತದಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆಸಲು ಪಾಕಿಸ್ತಾನ ಯಾವ ರೀತಿಯ ಸಹಾಯ ಮಾಡುತ್ತಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತಿದೆ ಎಂಬ ಅಂಶವನ್ನಿಡು ಭಾರತ ದನಿಯೆತ್ತಬಹುದು. ವಿಶ್ವಸಂಸ್ಥೆ ಕೂಡ ಪಾಕಿಸ್ತಾನಕ್ಕೆ ನೀಡುತ್ತಿರುವ ನೆರವನ್ನು ಕೂಡಲೇ ಸ್ಥಗಿತಗೊಳಿಸಬೇಕಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT