ಸಾಂದರ್ಭಿಕ ಚಿತ್ರ 
ದೇಶ

ಪಾಕ್ ವಾಯು ಪ್ರದೇಶ ಬಳಸುವುದು ಬೇಡ: ಕೇಂದ್ರಕ್ಕೆ ಏರ್ ಲೈನ್ಸ್ ಗಳ ಮನವಿ

ದಿನದಿಂದ ದಿನಕ್ಕೆ ಭಾರತ - ಪಾಕಿಸ್ತಾನ ನಡುವಿನ ಸಂಬಂಧ ಹಾಳಾಗುತ್ತಿದ್ದು, ಭದ್ರತೆ ಮತ್ತು ಆರ್ಥಿಕ ದೃಷ್ಟಿಯಿಂದ ಪಶ್ಚಿಮ ಭಾರತದಿಂದ...

ನವದೆಹಲಿ: ದಿನದಿಂದ ದಿನಕ್ಕೆ ಭಾರತ - ಪಾಕಿಸ್ತಾನ ನಡುವಿನ ಸಂಬಂಧ ಹಾಳಾಗುತ್ತಿದ್ದು, ಭದ್ರತೆ ಮತ್ತು ಆರ್ಥಿಕ ದೃಷ್ಟಿಯಿಂದ ಪಶ್ಚಿಮ ಭಾರತದಿಂದ(ಮುಖ್ಯವಾಗಿ ಅಹಮದಬಾದ್) ಗಲ್ಫ್ ದೇಶಗಳಿಗೆ ಪ್ರಯಾಣ ಬೆಳೆಸಲು ಪಾಕಿಸ್ತಾನ ವಾಯು ಪ್ರದೇಶ ಬಳಸುವುದನ್ನು ಬಿಟ್ಟು, ಅರಬ್ಬಿಯನ್ ಸಮುದ್ರದ ಮೂಲಕ ಹಾರಾಟ ನಡೆಸಲು ಅವಕಾಶ ನೀಡುವಂತೆ ಭಾರತೀಯ ವಿಮಾನಯಾನ ಸಂಸ್ಥೆಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿವೆ.
ಏರ್ ಇಂಡಿಯಾ, ಜೆಟ್ ಏರ್ ವೇಸ್, ಇಂಡಿಗೋ ಮತ್ತು ಸ್ಪೈಜೆಟ್ ಸಂಸ್ಥೆಗಳು ಪಾಕಿಸ್ತಾನ ಮೂಲಕ ಗಲ್ಫ್ ರಾಷ್ಟ್ರಗಳಿಗೆ ಪ್ರಯಾಣ ಬೆಳೆಸುತ್ತವೆ. ಕೆಲವು ದಿನಗಳ ಹಿಂದಷ್ಟೇ ಪಾಕಿಸ್ತಾನದಿಂದ ಹಾರಾಟ ನಡೆಸುವ ನಿಗದಿಯಾಗದ ವಿಮಾನಗಳು ದೇಶಕ್ಕೆ ಮರಳಬೇಕು ಎಂದು ಭಾರತ ಕೇಳಿಕೊಂಡಿತ್ತು ಮತ್ತು ಪಾಕಿಸ್ತಾನ ಸಹ ಇದಕ್ಕೆ ಪ್ರತೀಕಾರ ತೀರಿಕೊಳ್ಳುವ ಸಾಧ್ಯತೆ ಇದೆ. ಈ ಆತಂಕದಿಂದಾಗಿ ಮತ್ತು ವೆಚ್ಚದ ದೃಷ್ಟಿಯಿಂದಲೂ ಪಾಕ್ ವಾಯು ಪ್ರದೇಶ ಬಿಟ್ಟುಬಿಡಲು ಅನುಮತಿ ನೀಡುವಂತೆ ಕೇಳಲಾಗಿದೆ ಎಂದು ವಿಮಾನಯಾನ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಹಮದಾಬಾದ್ ನಿಂದ ಗಲ್ಫ್ ಗೆ ನೇರ ಮಾರ್ಗ ಬಳಸಲು ಅನುಮತಿ ನೀಡಬೇಕು ಎಂದು ಸ್ಪೈಸ್ ಜೆಟ್ ರಕ್ಷಣಾ ಮತ್ತು ವಿಮಾನಯಾನ ಸಚಿವಾಲಯಕ್ಕೆ ಮನವಿ ಮಾಡಿದೆ. ಪ್ರಸ್ತೂತ ಈ ಮಾರ್ಗವನ್ನು ವಾಯುಪಡೆ ಮತ್ತು ನೌಕಾಪಡೆ ಕಾಯ್ದಿರಿಸಲಾಗಿದೆ.
ಈ ವಾಯು ಮಾರ್ಗ ಸೂಕ್ಷ್ಮ ಪ್ರದೇಶವಾಗಿರುವುದರಿಂದ ರಕ್ಷಣಾ ಇಲಾಖೆ ಇನ್ನೂ ಅನುಮತಿ ನೀಡಿಲ್ಲ ಎಂದು ವಿಮಾನಯಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಈ ಸಂಬಂಧ ವಿಮಾನಯಾನ ಸಂಸ್ಥೆಗಳಿಂದ ತುಂಬಾ ಮನವಿಗಳು ಬರುತ್ತಿದ್ದು, ಸ್ಥಳದಿಂದ ಸ್ಥಳಕ್ಕೆ ನೇರ ಮಾರ್ಗಗಳಿಗೆ ಅವಕಾಶ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT