ಜೆಡಿಯು ನಾಯಕ ಶರದ್ ಯಾದವ್ 
ದೇಶ

ಗುಜರಾತ್ ಶಾಸಕರ ಅಮಾನತು ಅಪ್ರಜಾಪ್ರಭುತ್ವವಾದದ್ದು: ಜೆಡಿಯು

ಗುಜರಾತ್ ವಿಧಾನಸಭೆಯಲ್ಲಿ 50 ಕಾಂಗ್ರೆಸ್ ಶಾಸಕರನ್ನು ಅಮಾನತು ಮಾಡಿರುವುದೊಂದು ಪ್ರಜಾಪ್ರಭುತ್ವಕ್ಕೆ ವಿರೋಧವಾದದ್ದು ಎಂದು ಜೆಡಿಯು...

ನವದೆಹಲಿ: ಗುಜರಾತ್ ವಿಧಾನಸಭೆಯಲ್ಲಿ 50 ಕಾಂಗ್ರೆಸ್ ಶಾಸಕರನ್ನು ಅಮಾನತು ಮಾಡಿರುವುದೊಂದು ಪ್ರಜಾಪ್ರಭುತ್ವಕ್ಕೆ ವಿರೋಧವಾದದ್ದು ಎಂದು ಜೆಡಿಯು ಮಂಗಳವಾರ ಹೇಳಿದೆ.

ಶಾಸಕರ ಅಮಾನತು ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜೆಡಿಯು ನಾಯಕ ಶರದ್ ಯಾದವ್ ಅವರು, ದಲಿತ ಮೇಲಿನ ಹಲ್ಲೆ ಖಂಡಿಸಿ ವಿಧಾನಸಭೆಯಲ್ಲಿ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. ವಿಚಾರವನ್ನು ಚರ್ಚೆ ನಡೆಸಲು ಬದಲು ಶಾಸಕರನ್ನೇ ಅಮಾನತು ಮಾಡಿರುವುದು ಸರಿಯಲ್ಲ. ಈ ರೀತಿಯ ಆದೇಶ ಪ್ರಜಾಪ್ರಭುತ್ವಕ್ಕೆ ವಿರೋಧವಾದದ್ದು ಎಂದು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹೊಸ ಟ್ರೆಂಡ್ ವೊಂದು ಬಂದಿದೆ. ಇಂದು ಗುಜರಾತ್ ನಲ್ಲಿ ನಡೆದ ರೀತಿಯಲ್ಲೇ ಈ ಹಿಂದೆ ತಮಿಳುನಾಡಿನಲ್ಲಿ ನಡೆದಿತ್ತು. ವಿವಾದಿತ ವಿಚಾರಗಳ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆಸುವ ಬದಲು ಪ್ರತಿಭಟಿಸುವ ನಾಯಕರ ವಿರುದ್ಧವೇ ಕ್ರಮಕೈಗೊಳ್ಳಲಾಗುತ್ತಿದೆ. ಆರೋಗ್ಯಕರ ಪ್ರಜಾಪ್ರಭುತ್ವದಲ್ಲಿ ಈ ರೀತಿಯ ಬೆಳವಣಿಗೆ ಉತ್ತಮವಾದುದ್ದಲ್ಲ.
 
ನಾಯಕರನ್ನು ಅಮಾನತು ಮಾಡುವುದರಿಂದ ಸಮಸ್ಯೆಗೆ ಪರಿಹಾರ ಸಿಕ್ಕುವುದಿಲ್ಲ. ಎಲ್ಲರ ಅಭಿಪ್ರಾಯವನ್ನು ಕೇಳಿ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಚರ್ಚೆ ಮಾಡುವುದನ್ನು ಯಾರಿಂದಲೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಶರದ್ ಯಾದವ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT