ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ (ಸಂಗ್ರಹ ಚಿತ್ರ) 
ದೇಶ

ದಲಿತರು, ಹಿಂದುಳಿದವರು ರಾಷ್ಟ್ರೀಯವಾದಿಗಳಲ್ಲವೇ?: ಪ್ರಧಾನಿ ಮೋದಿಗೆ ರಾಹುಲ್ ಪ್ರಶ್ನೆ

ದಲಿತರು ಹಾಗೂ ಹಿಂದುಳಿದ ಜನರು ರಾಷ್ಟ್ರೀಯವಾದಿಗಳಲ್ಲವೇ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ...

ನವದೆಹಲಿ: ದಲಿತರು ಹಾಗೂ ಹಿಂದುಳಿದ ಜನರು ರಾಷ್ಟ್ರೀಯವಾದಿಗಳಲ್ಲವೇ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬುಧವಾರ ಪ್ರಶ್ನೆ ಹಾಕಿದ್ದಾರೆ.

ನಿನ್ನೆ ದೆಹಲಿಯಲ್ಲಿ ನಡೆದ ಬಿಜೆಪಿಯ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ರಾಷ್ಟ್ರೀಯವಾದಿಗಳು ಬಿಜೆಪಿ ಜೊತೆಗಿದ್ದು, ಇದೀಗ ದಲಿತರು ಹಾಗೂ ಹಿಂದುಳಿದವರನ್ನು ಸೇರ್ಪಡೆಗೊಳಿಸಲು ಪಕ್ಷ ಉದ್ದೇಶಿಸಿದೆ ಎಂದು ಹೇಳಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿಯವರು, ರಾಷ್ಟ್ರೀಯವಾದಿಗಳ ಗುರ್ತಿಕೆಗಳಿಲ್ಲದೆಯೇ ಬಿಜೆಪಿ ದಲಿತರು ಹಾಗೂ ಹಿಂದುಳಿದವರಿಗಾಗಿ ಕೆಲಸ ಮಾಡಲು ಹೊರಟಿದೆ. ರಾಷ್ಟ್ರೀಯವಾದಿಗಳು ಬಿಜೆಪಿಯೊಂದಿಗಿದ್ದು, ದಲಿತರು ಹಾಗೂ ಹಿಂದುಳಿದವರನ್ನು ಸೇರ್ಪಡೆಗೊಳಿಸಲು ಕೆಲಸ ಮಾಡಲಾಗುತ್ತದೆ ಎಂದು ಮೋದಿಯವರು ಹೇಳಿದ್ದಾರೆ. ಅಂದರೆ ದಲಿತರು ಹಾಗೂ ಹಿಂದುಳಿದವರು ರಾಷ್ಟ್ರೀವಾದಿಗಳೇ ಅಲ್ಲ ಎಂಬುದು ಇದರ ಅರ್ಥವೇ ಮೋದಿ ಜೀ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT