ಅರುಣ್ ಜೇಟ್ಲಿ 
ದೇಶ

ಪಾಕ್ ನಲ್ಲಿ ನಡೆಯಲಿರುವ ಸಾರ್ಕ್ ಸಭೆಗೆ ಅರುಣ್ ಜೇಟ್ಲಿ ಗೈರಾಗುವ ಸಾಧ್ಯತೆ

ಮುಂದಿನ ವಾರ ಪಾಕಿಸ್ತಾನದಲ್ಲಿ ನಡೆಯಲಿರುವ ಸಾರ್ಕ್ ರಾಷ್ಟ್ರಗಳ ಸಭೆಗೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಭಾಗವಹಿಸುವುದಿಲ್ಲ ಎಂಬ ವರದಿಗಳು ಪ್ರಕಟವಾಗಿದೆ.

ನವದೆಹಲಿ: ಮುಂದಿನ ವಾರ ಪಾಕಿಸ್ತಾನದಲ್ಲಿ ನಡೆಯಲಿರುವ ಸಾರ್ಕ್ ರಾಷ್ಟ್ರಗಳ ಸಭೆಗೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಭಾಗವಹಿಸುವುದಿಲ್ಲ ಎಂಬ ವರದಿಗಳು ಪ್ರಕಟವಾಗಿದೆ.

ಅರುಣ್ ಜೇಟ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಸಾರ್ಕ್ ರಾಷ್ಟ್ರಗಳ ಸಭೆಗೆ ಗೈರು ಹಾಜರಾಗುವುದರಿಂದ ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧದಲ್ಲಿ ಈಗಾಗಲೇ ಉಂಟಾಗಿರುವ ಬಿರುಕನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.  ಆಗಸ್ಟ್ 25-26 ರಂದು ಪಾಕಿಸ್ತಾನದಲ್ಲಿ ಸಾರ್ಕ್ ರಾಷ್ಟ್ರಗಳ ವಿತ್ತ ಸಚಿವರ ಸಭೆ ನಡೆಯಲಿದೆ. ಆದರೆ ಅರುಣ್ ಜೇಟ್ಲಿ ಮಾತ್ರ ಸಭೆಗೆ ಗೈರಾಗುವ ಸಾಧ್ಯತೆ ಇದೆ ಎಂದು ನ್ಯೂಸ್ 18 ವರದಿ ಪ್ರಕಟಿಸಿದೆ. ಅರುಣ್ ಜೇಟ್ಲಿ ಪರವಾಗಿ ಹಣಕಾಸು ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಹಾಗೂ ಹಣಕಾಸು ಇಲಾಖೆಯ ರಾಜ್ಯ ಸಚಿವರು ಪಾಕಿಸ್ತಾನದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ವರೆಗೂ ಭಾರತ ಸರ್ಕಾರದಿಂದ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಈ  ತಿಂಗಳ ಪ್ರಾರಂಭದಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಹೋಗಿ ಬಂದ ನಂತರ ಪ್ರತಿಕ್ರಿಯೆ ನೀಡಿದ್ದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಪಾಕಿಸ್ತಾನಕ್ಕೆ ಹೋಗುವುದು ನರಕಕ್ಕೆ ಹೋದಂತೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT